23.6 C
ಪುತ್ತೂರು, ಬೆಳ್ತಂಗಡಿ
March 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

ಬೆಳ್ತಂಗಡಿ: ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ ಇವರಿಗೆ ಭಕ್ತಿಪೂರ್ವಕ ಗೌರವಾಭಿನಂದನೆ ಮಹಾಭಿವಂದ್ಯ ಎ.12 ರಂದು ಅಳದಂಗಡಿ ಸತ್ಯದೇವತಾ ವಠಾರದಲ್ಲಿ ನಡೆಯಲಿದೆ ಎಂದು ಹನುಮೋತ್ಸವ ಸಮಿತಿ ಅಧ್ಯಕ್ಷ ಸಂಪತ್ ಬಿ ಸುವರ್ಣ ತಿಳಿಸಿದ್ದಾರೆ.

ದೀಪ ಪ್ರಜ್ವಲನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ನೆರವೇರಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಧಾರ್ಮಿಕ ಉಪನ್ಯಾಸಕ ನೀಡಲಿದ್ದಾರೆ‌.

ಮುಖ್ಯ ಅತಿಥಿಗಳಾಗಿ ದ.ಕ ಸಂಸದರು ಕ್ಯಾ.ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಮಾಜಿ ಶಾಸಕ ಪ್ರಭಾಕರ ಬಂಗೇರ,ಗುಜರಾತ್ ತುಳುಕೂಟ ಅಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ,ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತ ಮೊಕ್ತೇಸರಾದ ಶಿವಪ್ರಸಾದ್ ಅಜಿಲ,ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಸಂಚಾಲಕ ಮೋಹನ್ ಕುಮಾರ್, ಎಕ್ಸೆಲ್ ಕಾಲೇಜು ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಪತ್ ಬಿ ಸುವರ್ಣ ತಿಳಿಸಿದರು.

Related posts

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ