22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

ಬೆಳ್ತಂಗಡಿ: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು OS 2145/2025 ಪ್ರಕರಣದಲ್ಲಿ ಜಾನ್ ಡೋ (ಅಶೋಕಕುಮಾರ್) ಆದೇಶ ನೀಡಿದೆ. ಈ ಆದೇಶದಂತೆ, ಯಾರೇ ಆಗಿದ್ದರೂ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿಯನ್ನು ಪ್ರಕಟಿಸಲು ಅಥವಾ ಹರಡಲು ಆಗುವುದಿಲ್ಲ.

ಜಾನ್ ಡೋ (ಅಶೋಕಕುಮಾರ್) ಆದೇಶ ಎಂದರೇನು?
-ಜಾನ್ ಡೋ (ಅಶೋಕಕುಮಾರ್) ಆದೇಶ ಎಂದರೆ, ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧವೂ ಜಾರಿಯಾಗುವ ಕಾನೂನು ಕ್ರಮ.
-ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಮತ್ತು ಇತರ ಆನ್‌ಲೈನ್ ತಾಣಗಳಲ್ಲಿ ಅವಹೇಳನಕಾರಿ ಮತ್ತು ಅಪಪ್ರಚಾರ ಹೆಚ್ಚಿರುವ ಕಾರಣ, ಇದನ್ನು ತಡೆಯಲು ಈ ಆದೇಶ ಬಹಳ ಪ್ರಮುಖವಾಗಿದೆ.

ಈ ಆದೇಶದ ಮಹತ್ವ: ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಯಾವುದೇ ಅವಹೇಳನಕಾರಿ ಅಪಪ್ರಚಾರವನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಹರಡುವುದು ನಿಷೇಧಿಸಲಾಗಿದೆ.

ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದರೆ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು

ಈ ಆದೇಶದ ಪ್ರಕಾರ, ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮ ಸಂಸ್ಥೆಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಯಾವುದೇ ಅವಹೇಳನಕಾರಿ ವಿಚಾರ ಹಂಚಿಕೊಂದಿದ್ದಲ್ಲಿ ತಕ್ಷಣ ಅಳಿಸಿಹಾಕುವುದು ಮತ್ತು ಮುಂದುವರಿಸಿದ್ದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಆಗುವ ಸಾಧ್ಯತೆ ಇರುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಗೌರವ ಹಾಗೂ ಪ್ರತಿಷ್ಠೆಯನ್ನು ರಕ್ಷಿಸಲು ಮತ್ತು ಅಪಪ್ರಚಾರ ತಡೆಯಲು ಮಹತ್ವದ ಆದೇಶವಾಗಿದೆ.

ಈ ಪ್ರಕರಣವನ್ನು ಹಿರಿಯ ನ್ಯಾಯವಾದಿ ಎಸ್. ರಾಜಶೇಖರ್ ಹಿಳಿಯಾರು ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಪರ ವಾದಿಸಿದರು.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya
error: Content is protected !!