39.2 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯ ಸಹಕಾರ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಕೋಶ, ವಾಣಿಜ್ಯ ಸಂಘ, ಪ್ಲೇಸ್ಮೆಂಟ್ ಸೆಲ್, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್ -ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಮಾ.25 ರಂದು ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗಾವಕಾಶಗಳು ಹಾಗೂ ಡಿಪ್ಲೋಮೋ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳ ಬಗ್ಗೆ ಯುವಜನರ ಕ್ಲಸ್ಟರ್ ತರಗತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಕಾರ್ಯಾಗಾರದಲ್ಲಿ ಮಂಗಳೂರಿನ ಸಹಕಾರಿ ಯೂನಿಯನ್ ನ ಕಾರ್ಯನಿರ್ವಹಣಾಧಿಕಾರಿ ಎಸ್ ವಿ ಹಿರೇಮಠ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಹಕಾರಿ ಕ್ಷೇತ್ರದಲ್ಲಿರುವ ವಿವಿಧ ಉದ್ಯೋಗವಕಾಶಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ. ಕಾರ್ಯಕ್ರಮದಲ್ಲಿ ಮಂಗಳೂರು ಸಹಕಾರಿ ಯೂನಿಯನ್ ನ ವ್ಯವಸ್ಥಾಪಕ ನಾಗಪ್ರಸಾದ್ , ಪ್ಲೇಸ್ಮೆಂಟ್ ಅಧಿಕಾರಿಗಳಾದ ಪ್ರೊ. ರಶ್ಮಿ ಎಚ್., ಐಕ್ಯೂಎಸಿ ಸಂಚಾಲಕರಾದ ಡಾ| ಕುಶಾಲಪ್ಪ ಎಸ್ ಉಪಸ್ಥಿತರಿದ್ದರು.

ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ರೋವರ್ ಸ್ಕೌಟ್ ಲೀಡರ್ ಡಾ| ರವಿ ಎಂ. ಎನ್., ಸ್ವಾಗತಿಸಿ, ವಾಣಿಜ್ಯ ಸಂಘ ಸಂಚಾಲಕರಾದ ಪ್ರೊ| ನವೀನ ವಂದಿಸಿದರು.

Related posts

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!