ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯ ಸಹಕಾರ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಕೋಶ, ವಾಣಿಜ್ಯ ಸಂಘ, ಪ್ಲೇಸ್ಮೆಂಟ್ ಸೆಲ್, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್ -ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಮಾ.25 ರಂದು ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗಾವಕಾಶಗಳು ಹಾಗೂ ಡಿಪ್ಲೋಮೋ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳ ಬಗ್ಗೆ ಯುವಜನರ ಕ್ಲಸ್ಟರ್ ತರಗತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಕಾರ್ಯಾಗಾರದಲ್ಲಿ ಮಂಗಳೂರಿನ ಸಹಕಾರಿ ಯೂನಿಯನ್ ನ ಕಾರ್ಯನಿರ್ವಹಣಾಧಿಕಾರಿ ಎಸ್ ವಿ ಹಿರೇಮಠ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಹಕಾರಿ ಕ್ಷೇತ್ರದಲ್ಲಿರುವ ವಿವಿಧ ಉದ್ಯೋಗವಕಾಶಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ. ಕಾರ್ಯಕ್ರಮದಲ್ಲಿ ಮಂಗಳೂರು ಸಹಕಾರಿ ಯೂನಿಯನ್ ನ ವ್ಯವಸ್ಥಾಪಕ ನಾಗಪ್ರಸಾದ್ , ಪ್ಲೇಸ್ಮೆಂಟ್ ಅಧಿಕಾರಿಗಳಾದ ಪ್ರೊ. ರಶ್ಮಿ ಎಚ್., ಐಕ್ಯೂಎಸಿ ಸಂಚಾಲಕರಾದ ಡಾ| ಕುಶಾಲಪ್ಪ ಎಸ್ ಉಪಸ್ಥಿತರಿದ್ದರು.

ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ರೋವರ್ ಸ್ಕೌಟ್ ಲೀಡರ್ ಡಾ| ರವಿ ಎಂ. ಎನ್., ಸ್ವಾಗತಿಸಿ, ವಾಣಿಜ್ಯ ಸಂಘ ಸಂಚಾಲಕರಾದ ಪ್ರೊ| ನವೀನ ವಂದಿಸಿದರು.

Related posts

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya
error: Content is protected !!