23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

ಬೆಳ್ತಂಗಡಿ: ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿಯನ್ನು ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಲಾಯಿತು.

ಈ ವಿಚಾರಗೋಷ್ಠಿಯ ಮುಖ್ಯ ಉದ್ದೇಶವು ಔಷಧಿ ಉತ್ಪಾದನೆಗೆ ಸಂಬಂಧಿಸಿದ ಗುಣಮಟ್ಟದ ನಿಯಂತ್ರಣ, ಸುರಕ್ಷತೆ, ನಿಯಮಗಳು ಹಾಗೂ ಕಾರ್ಯವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದಾಗಿತ್ತು.

ಕಾರ್ಯಕ್ರಮದ ಸಂಪನ್ಮೂಲರಾದ ರಾಮಚಂದ್ರ ಗಾಣಿಗರವರು, cGMPಯ ಅವಶ್ಯಕತೆ, ಅದರ ತತ್ವಗಳು, ಪ್ರಕ್ರಿಯೆಗಳ ಮಾನ್ಯತೆ ಮತ್ತು ಅನುಷ್ಠಾನ ಕ್ರಮಗಳು ಬಗ್ಗೆ ಸುಲಭ, ಸುಂದರ ಹಾಗೂ ಪರಿಣಾಮಕಾರಿ ರೀತಿಯಲ್ಲಿ ಮಾಹಿತಿ ನೀಡಿದರು. ಔಷಧಿ ಉತ್ಪಾದನೆಯಲ್ಲಿ ಗುಣಮಟ್ಟ ನಿಯಂತ್ರಣ ಮತ್ತು ದೃಢೀಕರಣ, ಉತ್ಪಾದನಾ ಘಟಕದ ಸ್ವಚ್ಚತೆ, ಸುರಕ್ಷತಾ ನಿಯಮಗಳು ಮತ್ತು ಡಾಕ್ಯುಮೆಂಟೇಶನ್ ಪ್ರಕ್ರಿಯೆಗಳು, ಹೊಸ ತಂತ್ರಜ್ಞಾನಗಳ ಬಳಕೆ ಮತ್ತು ಅಂತರಾಷ್ಟ್ರೀಯ ಮಾನದಂಡಗಳು ಇಂತಹ ಹಲವು ಅಗತ್ಯ ಮಾಹಿತಿಗಳಿಂದ ಕೂಡಿದ್ದ ವಿಚಾರ ಗೋಷ್ಠಿಯು ವಿದ್ಯಾರ್ಥಿಗಳಿಗೆ ಜ್ಞಾನದಾಯಕವಾಗಿತ್ತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಮಲ್ಲಿಕಾರ್ಜುನ ಗೌಡರವರು ಅಧ್ಯಕ್ಷತೆ ವಹಿಸಿ ಕಾರ‍್ಯಕ್ರಮದ ಕುರಿತು ಮಾತನಾಡಿ ಮುಂಬರುವ ದಿನಗಳಲ್ಲಿ ಇಂತಹ ಹಲವು ಮಾಹಿತಿದಾಯಕ ವಿಚಾರ ಸಂಕಿರಣಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳನ್ನು ಸರ್ಧಾತ್ಮಕ ಜಗತ್ತಿಗೆ ಅಣಿಮಾಡುವ ಕಾಲೇಜಿನ ಆಶಯವನ್ನು ವ್ಯಕ್ತಪಡಿಸಿದರು. ಪ್ರಾಧ್ಯಾಪಕಿಯರಾದ ಕು. ಪ್ರತೀಕ್ಷಾ ಹಾಗೂ ಶ್ರೀಮತಿ ವಿದ್ಯಾಶ್ರೀರವರುಕಾರ‍್ಯಕ್ರಮ ನಿರ್ವಹಿಸಿದರು. ಕಾಲೇಜಿನ ಶಿಕ್ಷಕ ಹಾಗೂ ಶಿಕ್ಷಕೇತರ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ರಾಜ್ಯ ಪಠ್ಯಕ್ರಮ ಶಾಲೆಯ ವಾರ್ಷಿಕೋತ್ಸವ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
error: Content is protected !!