28.8 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ :ಬ್ಯಾಂಕ್ ಒಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, 15 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಸಮಾರೋಪ ಕಾರ್ಯಕ್ರಮ ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಮಾಹಿತಿ ನೀಡಿದರು.ಬಹಳ ನಾಜುಕಾದ ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದ ಮಹಿಳೆಯರಿಗೆ ಹುರಿದುಂಬಿಸಿ ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಲ್ಲೇರಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯಾದ ಜಯರಾಜ್ ಜೈನ್ ಇವರು ಮಹಿಳೆಯರು ಸಣ್ಣ ಅವಧಿಯಲ್ಲಿ ಹೆಚ್ಚಿನ ಕೌಶಲ್ಯ ದ ತರಬೇತಿ ಪಡೆದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದರು. ತರಬೇತಿ ಪಡೆದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಕಲ್ಲೇರಿ ಹಾಲು ಉತ್ಪಾದಕರ ಸಂಘದ ಸಿಬ್ಬಂದಿ ಪ್ರಮಿಳಾ, ತರಬೇತುದಾರರಾದ ಶುಭ ಲಕ್ಷ್ಮಿ, ಟೈಲರಿಂಗ್ ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು.ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 22 ಮಹಿಳೆಯರು ಈ 15 ದಿವಸದ ತರಬೇತಿ ಪಡೆದು ಪ್ರಮಾಣ ಪತ್ರವನ್ನು ಪಡೆದರು.ಸ್ನೇಹಾ ಭಟ್ ಕಾರ್ಯಕ್ರಮ ನಿರೂಪಿಸಿ,ಸುಮಲತಾ ಇವರು ಸ್ವಾಗತಿಸಿದರು, ಶಿಲ್ಪಾ ಇವರು ಧನ್ಯವಾದಗೈದರು

Related posts

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya
error: Content is protected !!