September 6, 2026
ಗ್ರಾಮಾಂತರ ಸುದ್ದಿ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ :ಬ್ಯಾಂಕ್ ಒಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, 15 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಸಮಾರೋಪ ಕಾರ್ಯಕ್ರಮ ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಮಾಹಿತಿ ನೀಡಿದರು.ಬಹಳ ನಾಜುಕಾದ ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದ ಮಹಿಳೆಯರಿಗೆ ಹುರಿದುಂಬಿಸಿ ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಲ್ಲೇರಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯಾದ ಜಯರಾಜ್ ಜೈನ್ ಇವರು ಮಹಿಳೆಯರು ಸಣ್ಣ ಅವಧಿಯಲ್ಲಿ ಹೆಚ್ಚಿನ ಕೌಶಲ್ಯ ದ ತರಬೇತಿ ಪಡೆದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದರು. ತರಬೇತಿ ಪಡೆದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಕಲ್ಲೇರಿ ಹಾಲು ಉತ್ಪಾದಕರ ಸಂಘದ ಸಿಬ್ಬಂದಿ ಪ್ರಮಿಳಾ, ತರಬೇತುದಾರರಾದ ಶುಭ ಲಕ್ಷ್ಮಿ, ಟೈಲರಿಂಗ್ ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು.ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 22 ಮಹಿಳೆಯರು ಈ 15 ದಿವಸದ ತರಬೇತಿ ಪಡೆದು ಪ್ರಮಾಣ ಪತ್ರವನ್ನು ಪಡೆದರು.ಸ್ನೇಹಾ ಭಟ್ ಕಾರ್ಯಕ್ರಮ ನಿರೂಪಿಸಿ,ಸುಮಲತಾ ಇವರು ಸ್ವಾಗತಿಸಿದರು, ಶಿಲ್ಪಾ ಇವರು ಧನ್ಯವಾದಗೈದರು

Related posts

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಉದ್ಯೋಗದ ಪ್ರಥಮ ವೇತನ ಬಾರ್ಯ ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಸಮರ್ಪಣೆ

Suddi Udaya

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya
error: Content is protected !!