23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ :ಬ್ಯಾಂಕ್ ಒಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, 15 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಸಮಾರೋಪ ಕಾರ್ಯಕ್ರಮ ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಮಾಹಿತಿ ನೀಡಿದರು.ಬಹಳ ನಾಜುಕಾದ ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದ ಮಹಿಳೆಯರಿಗೆ ಹುರಿದುಂಬಿಸಿ ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಲ್ಲೇರಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯಾದ ಜಯರಾಜ್ ಜೈನ್ ಇವರು ಮಹಿಳೆಯರು ಸಣ್ಣ ಅವಧಿಯಲ್ಲಿ ಹೆಚ್ಚಿನ ಕೌಶಲ್ಯ ದ ತರಬೇತಿ ಪಡೆದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದರು. ತರಬೇತಿ ಪಡೆದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಕಲ್ಲೇರಿ ಹಾಲು ಉತ್ಪಾದಕರ ಸಂಘದ ಸಿಬ್ಬಂದಿ ಪ್ರಮಿಳಾ, ತರಬೇತುದಾರರಾದ ಶುಭ ಲಕ್ಷ್ಮಿ, ಟೈಲರಿಂಗ್ ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು.ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 22 ಮಹಿಳೆಯರು ಈ 15 ದಿವಸದ ತರಬೇತಿ ಪಡೆದು ಪ್ರಮಾಣ ಪತ್ರವನ್ನು ಪಡೆದರು.ಸ್ನೇಹಾ ಭಟ್ ಕಾರ್ಯಕ್ರಮ ನಿರೂಪಿಸಿ,ಸುಮಲತಾ ಇವರು ಸ್ವಾಗತಿಸಿದರು, ಶಿಲ್ಪಾ ಇವರು ಧನ್ಯವಾದಗೈದರು

Related posts

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

Suddi Udaya

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!