July 27, 2026
Uncategorized

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

ಬೆಳ್ತಂಗಡಿ: ನಾರಾವಿಯಲ್ಲಿ ಲೈನ್ ಮ್ಯಾನ್ ಆಗಿ ಕಳೆದ 27 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕಿಟ್ಟ ಯಾನೆ ಸುಧಾಕರ (45ವರ್ಷ) ರವರು ಇಂದು (ಮಾ.26ರಂದು) ಸಂಜೆ ಆಕಸ್ಮಿಕವಾಗಿ ಅಂಡಿಂಜೆಯಲ್ಲಿ ಸಾವನ್ನಪ್ಪಿದ್ದಾರೆ.

ಸುಧಾಕರ (ಕಿಟ್ಟ) ರವರು ನಾರಾವಿ ತುಂಬೆ ಗುಡ್ಡೆ ಸುರಾಜ ಕೃಪಾ ನಿವಾಸಿಯಾಗಿದ್ದು,ಇಂದು ಸಂಜೆಯ ಸಮಯಕ್ಕೆ ಇವರ ಮೃತದೇಹ ಟಿಸಿ ಹತ್ತಿರ ಅಂಡಿಂಜೆಯಲ್ಲಿ ಪತ್ತೆಯಾಗಿದ್ದು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆಂದು ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಇವರು ಬೆಳ್ತಂಗಡಿ ಉಪ ವಿಭಾಗ, ಅಂಡಿಂಜೆ ಕ್ಯಾಂಪ್, ವೇಣೂರು ಶಾಖೆಗಳಲ್ಲಿ ಲೈನ್ ಮ್ಯಾನ್ ವೃತ್ತಿಯನ್ನು ಉತ್ತಮವಾಗಿ ನಿರ್ವಹಿಸುತ್ತ, ಊರಿನಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಅವಿವಾಹಿತರಾಗಿದ್ದ ಅವರು ತಾಯಿ, ಓರ್ವ ಸಹೋದರಿ, ಓರ್ವ ಸಹೋದರನನ್ನು .ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದಲ್ಲಿ ಬೈಠಕ್

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya
error: Content is protected !!