23.6 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

ಬೆಳ್ತಂಗಡಿ: ನಾರಾವಿಯಲ್ಲಿ ಲೈನ್ ಮ್ಯಾನ್ ಆಗಿ ಕಳೆದ 27 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕಿಟ್ಟ ಯಾನೆ ಸುಧಾಕರ (45ವರ್ಷ) ರವರು ಇಂದು (ಮಾ.26ರಂದು) ಸಂಜೆ ಆಕಸ್ಮಿಕವಾಗಿ ಅಂಡಿಂಜೆಯಲ್ಲಿ ಸಾವನ್ನಪ್ಪಿದ್ದಾರೆ.

ಸುಧಾಕರ (ಕಿಟ್ಟ) ರವರು ನಾರಾವಿ ತುಂಬೆ ಗುಡ್ಡೆ ಸುರಾಜ ಕೃಪಾ ನಿವಾಸಿಯಾಗಿದ್ದು,ಇಂದು ಸಂಜೆಯ ಸಮಯಕ್ಕೆ ಇವರ ಮೃತದೇಹ ಟಿಸಿ ಹತ್ತಿರ ಅಂಡಿಂಜೆಯಲ್ಲಿ ಪತ್ತೆಯಾಗಿದ್ದು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆಂದು ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಇವರು ಬೆಳ್ತಂಗಡಿ ಉಪ ವಿಭಾಗ, ಅಂಡಿಂಜೆ ಕ್ಯಾಂಪ್, ವೇಣೂರು ಶಾಖೆಗಳಲ್ಲಿ ಲೈನ್ ಮ್ಯಾನ್ ವೃತ್ತಿಯನ್ನು ಉತ್ತಮವಾಗಿ ನಿರ್ವಹಿಸುತ್ತ, ಊರಿನಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಅವಿವಾಹಿತರಾಗಿದ್ದ ಅವರು ತಾಯಿ, ಓರ್ವ ಸಹೋದರಿ, ಓರ್ವ ಸಹೋದರನನ್ನು .ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

Suddi Udaya
error: Content is protected !!