25.8 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಕಲ್ಕಣಿಯಲ್ಲಿ ರಸ್ತೆ ಅಪಘಾತಬೈಕ್ ಸವಾರ ಸಯ್ಯದ್ ಪಾಶ ಮೃತ್ಯು

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್‌ಯ ಕಲ್ಕಣಿ ಎಂಬಲ್ಲಿ ಬೈಕೊಂದು ಕಾರನ್ನು ಓವರ್‌ಟೆಕ್ ಮಾಡುವ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಲ್ಲಿ, ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಸಾವನ್ನಪ್ಪಿದ ದುರ್ಘಟನೆ ಮಾ.26 ಬೆಳಿಗ್ಗೆ ನಡೆದಿದೆ.
ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕಲ್ಲಗುಡ್ಡೆ ಸಮೀಪದ ಟ್ರೀಪಾರ್ಕ್‌ಗೆ ಹೋಗುವ ರಸ್ತೆಯ ನಿವಾಸಿ ಸಯ್ಯದ್ ಸರ್ವರ್ ಪಾಶ( 42.ವ) ಈ ದುರ್ಘಟನೆಯಲ್ಲಿ ಮೃತಪಟ್ಟ ನತದೃಷ್ಟರಾಗಿದ್ದಾರೆ. ಸಯ್ಯದ್ ಪಾಶ ಅವರು ತಮ್ಮ ಬೈಕ್‌ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಕಲ್ಕಣಿ ಬಳಿಯಲ್ಲಿ ಕಾರನ್ನು ಓವರ್‌ಟೇಕ್ ಮಾಡುವ ಯತ್ನದಲ್ಲಿ ಅಪಘಾತ ಸಂಭವಿಸಿತು. ಈ ಸಂದರ್ಭ ಬೈಕ್ ನಿಯಂತ್ರಣ ತಪ್ಪಿ ಸವಾರ ರಸ್ತೆ ಬದಿಯ ಚರಂಡಿಗೆ ಬಿದ್ದು ಗಂಭೀರ ಗಾಯಗೊಂಡರು, ಕೂಡಲೇ ಸ್ಥಳೀಯರು ಸೇರಿ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರು ಬೆಳ್ತಂಗಡಿ ಜಮಾತ್ ಸದಸ್ಯ ಇಸುಬು ರವರ ಕಿರಿಯ ಮಗಳ ಗಂಡನಾಗಿದ್ದಾರೆ.

Related posts

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆಡಾ. ಪದ್ಮಪ್ರಸಾದ್ ಅಜಿಲ ಹಾಗೂ ಶಿವಪ್ರಸಾದ ಅಜಿಲ ಸಂತಾಪ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya
error: Content is protected !!