July 27, 2026
Uncategorized

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

ಬೆಳ್ತಂಗಡಿ: ನಾರಾವಿಯಲ್ಲಿ ಲೈನ್ ಮ್ಯಾನ್ ಆಗಿ ಕಳೆದ 27 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕಿಟ್ಟ ಯಾನೆ ಸುಧಾಕರ (45ವರ್ಷ) ರವರು ಇಂದು (ಮಾ.26ರಂದು) ಸಂಜೆ ಆಕಸ್ಮಿಕವಾಗಿ ಅಂಡಿಂಜೆಯಲ್ಲಿ ಸಾವನ್ನಪ್ಪಿದ್ದಾರೆ.

ಸುಧಾಕರ (ಕಿಟ್ಟ) ರವರು ನಾರಾವಿ ತುಂಬೆ ಗುಡ್ಡೆ ಸುರಾಜ ಕೃಪಾ ನಿವಾಸಿಯಾಗಿದ್ದು,ಇಂದು ಸಂಜೆಯ ಸಮಯಕ್ಕೆ ಇವರ ಮೃತದೇಹ ಟಿಸಿ ಹತ್ತಿರ ಅಂಡಿಂಜೆಯಲ್ಲಿ ಪತ್ತೆಯಾಗಿದ್ದು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆಂದು ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಇವರು ಬೆಳ್ತಂಗಡಿ ಉಪ ವಿಭಾಗ, ಅಂಡಿಂಜೆ ಕ್ಯಾಂಪ್, ವೇಣೂರು ಶಾಖೆಗಳಲ್ಲಿ ಲೈನ್ ಮ್ಯಾನ್ ವೃತ್ತಿಯನ್ನು ಉತ್ತಮವಾಗಿ ನಿರ್ವಹಿಸುತ್ತ, ಊರಿನಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಅವಿವಾಹಿತರಾಗಿದ್ದ ಅವರು ತಾಯಿ, ಓರ್ವ ಸಹೋದರಿ, ಓರ್ವ ಸಹೋದರನನ್ನು .ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya
error: Content is protected !!