23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

ಬೆಳ್ತಂಗಡಿ: ರೈತರು ಗ್ರಾಮೀಣ ಕ್ರೀಡೆಯಾಗಿ ಆಚರಣೆ ಮಾಡಿಕೊಂಡು ಬರತಕ್ಕಂತ ಕಂಬಳ ಇಂದು ವಿಶ್ವ ಮಟ್ಟದಲ್ಲಿ ಪ್ರಸಿದ್ದಿ ಪಡೆದಿದೆ.ವೇಣೂರು- ಪೆರ್ಮುಡ ಕಂಬಳ ಅನೇಕ ವಿಶೇಷತೆಯಿಂದ ಕೂಡಿದ್ದು ಮಾ.30 ರಂದು ಎಲ್ಲರ ಕೂಡುವಿಕೆಯಿಂದ ವಿಜೃಂಭಣೆಯಿಂದ ನಡೆಯಲಿದೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ರಕ್ಷಿತ್ ಶಿವರಾಮ್ ಹೇಳಿದರು.

ಅವರು ಮಾ.26 ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ನಡೆದ ವೇಣೂರು-ಪೆರ್ಮುಡ ೩೨ನೆ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಳೆದ 32 ವರ್ಷಗಳ ಹಿಂದೆ ದಿ.ವಸಂತ ಬಂಗೇರರವರು ಅಂದಿನ ಕಾಲದಲ್ಲಿ ಕಂಬಳ ಪ್ರಾರಂಭಿಸಿ, ಜೊತೆ ಇದ್ದವರಿಗೆ ಅಧ್ಯಕ್ಷತೆ ನೀಡಿದ್ದಾರೆ. ಇದರಿಂದ ಹಲವಾರು ಮಂದಿ ಅಧ್ಯಕ್ಷತೆ ಆಗಿದ್ದಾರೆ ಎಂದರು.

ಈ ಸಲ ಕಂಬಳವು ಯುಗಾದಿ,ರಂಜಾನ್ ಸಮಯದಲ್ಲಿ ಬಂದಿದ್ದು ಸೌಹಾರ್ದತೆಯಿಂದ ನಡೆಯಲಿದ್ದು ಎಲ್ಲಾ ಧರ್ಮದ ಧರ್ಮಗುರುಗಳನ್ನು ಆಹ್ವಾನಿಸಲಿದ್ದೇವೆ.

ಕಂಬಳದ ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ನೇರವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಕಂಬಳ‌ ಸಮಿತಿ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಸಚಿವರಾದ ದಿನೇಶ್ ಗುಂಡೂರಾವ್,ಸಂತೋಷ್ ಲಾಡ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ಹಾಗೂ ಮಾಜಿ ಸದಸ್ಯ ಹರೀಶ್ ಕುಮಾರ್,ಮಾಜಿ ಸಚಿವ ರಮಾನಾಥ ರೈ,ಶಾಸಕ ಅಶೋಕ್ ಕುಮಾರ್ ರೈ,ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಸಹಿತ ವಿವಿಧ ಕ್ಷೇತ್ರದ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಚಲನ ಚಿತ್ರ ನಟ ನಟಿಯರು,ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ ಎಂದರು.

ಪೆರ್ಮುಡ ಕಂಬಳದಲ್ಲಿರುವ ವಿಶೇಷತೆಗಳು: ಸುಮಾರು ಏಳೂವರೆ ಎಕ್ರೆ ಜಾಗ ಕಂಬಳಕ್ಕೆ ಬಳಕೆ,ಕೋಣಗಳಿಗೆ ಅತೀ ಹೆಚ್ಚು ಜಾಗ ಮೀಸಲು,ಒಂದೂವರೆ ಎಕ್ರೆ ಜಾಗದಲ್ಲಿ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ,
ಅಚ್ಚುಕಟ್ಟಾದ ನೀರಿನ ವ್ಯವಸ್ಥೆ, ಎಲ್.ಇ.ಡಿ ಪರೆದೆಯಲ್ಲಿ ಕಂಬಳ ವೀಕ್ಷಣೆ,ಹೋಟೇಲ್ ವ್ಯವಸ್ಥೆ ಕಲ್ಪಿಸಲಾಗುವುದು,ಪವಿತ್ರ ಪಲ್ಗುಣಿ ನದಿ ತೀರದಲ್ಲಿ ಕಾರಂಜಿಯ ಝೇಂಕಾರ, ಆಗಮಿಸುವ ಕಂಬಳ ಪ್ರೇಮಿಗಳಿಗಾಗಿ ಬೋಡಿಂಗ್ ರೈಡ್ ಅಳವಡಿಕೆ,ಗ್ರಾಮೀಣ ಭಾಗದ ಖಾದ್ಯಗಳ ವಿಶೇಷ ಆಹಾರ ಮಳಿಗೆ,ಸಂತೆ ಮಾರುಕಟ್ಟೆ,ಮಹಿಳೆಯರಿಗೆ ಕಂಬಳ ವೀಕ್ಷಣೆಗೆ ಗೌಲರಿ ಸೌಲಭ್ಯ,ಆಗಮಿಸುವ ಕಂಬಳ ಕೋಣಗಳ ಮಾಲಕರಿಗೆ ವಿಶೇಷ ಉಡುಗೋರೆ ನೀಡಲಿದ್ದೇವೆ ಎಂದು ರಕ್ಷಿತ್ ಶಿವರಾಮ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್.ಕೋಟ್ಯಾನ್, ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ಮಹಾ ಪೋಷಕ ಪ್ರವೀಣ್ ಫರ್ನಾಂಡೀಸ್ ಹಳ್ಳಿಮನೆ, ಕೋಶಾಧಿಕಾರಿ ಅಶೋಕ್ ಪಾಣೂರು, ಉಪಾಧ್ಯಕ್ಷರಾದ ಸ್ಟೀವನ್ ಮೋನಿಸ್, ಗೋಪಾಲ ಪೂಜಾರಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya
error: Content is protected !!