30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಸಂದರ್ಶನ ಕೌಶಲ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ಮಾ26 ರಂದು ನಡೆಸಲಾಯಿತು.


ಬಯಸಿದ ಉದ್ಯೋಗವನ್ನು ಪಡೆಯುವುದು ಪ್ರತಿಯೊಬ್ಬರ ಕನಸು. ಆದರೆ, ನಿರಂತರವಾಗಿ ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ಹೆಚ್ಚುತ್ತಿರುವ ಸ್ಪರ್ಧಾತ್ಪಕ ಜಗತ್ತಿನಲ್ಲಿ ಉದ್ಯೋಗ ಅವಕಾಶಗಳನ್ನು ಪಡೆಯಬೇಕಾದರೆ ಉತ್ತಮ ಜ್ಞಾನದೊಂದಿಗೆ ಸಂದರ್ಶನವನ್ನು ಎದುರಿಸುವ ಧೈರ್ಯ ,ಬುದ್ಧಿವಂತಿಕೆ ಜೊತೆಗೆ ಕೌಶಲ್ಯವು ಬೇಕು ಎಂಬ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಮುಂದಿನ ವೃತ್ತಿ ಜೀವನಕ್ಕೆ ತಯಾರಿಸುವ ಹಾಗೂ ಸಂದರ್ಶಗಳನ್ನು ಹೇಗೆ ಎದುರಿಸಬೇಕು ಎಂಬುವುದರ ಅರಿವು ಮೂಡಿಸುವ ಸಲುವಾಗಿ ‘ಸಂದರ್ಶನ ಕೌಶಲ್ಯ” ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು.


ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಇವರು ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ.ಎ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ. ಎ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

Suddi Udaya
error: Content is protected !!