26.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorizedತಾಲೂಕು ಸುದ್ದಿಬೆಳ್ತಂಗಡಿವರದಿ

ನಂದಿನಿ ಹಾಲಿನ ದರ 4 ರೂ. ಏರಿಕೆ

ಬೆಂಗಳೂರು: ಈಗಾಗಲೇ ಹಲವು ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಏರಿಕೆ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇಂದು (ಮಾ.27) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆಯಾಗಲಿದೆ. ಈ ಮೂಲಕ ಒಂದು ವರ್ಷದ ಅಂತರದಲ್ಲಿ ಎರಡು ಬಾರಿ ಹಾಲಿನ ದರ ಹೆಚ್ಚಳವಾಗಿದೆ

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರತಿ ಲೀಟ‌ರ್ ಹಾಲಿನ ದರ 5 ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದರೆ ಇದೀಗ ಸಚಿವ ಸಂಪುಟ ಪ್ರತಿ ಲೀಟರ್ ಹಾಲಿಗೆ ನಾಲ್ಕು ರೂ ಏರಿಕೆಗೆ ಒಪ್ಪಿಗೆ ನೀಡಿದೆ.

ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಸ್ ಹಾಲು ಅರ್ಧ ಲೀಟರ್ ₹24 ರೂಪಾಯಿ. ಹೋಮೋಜಿನೆಸ್ಟ್ ಟೋನ್ಸ್ ಹಾಲು ಒಂದು ಲೀಟರ್ ₹45 ರೂಪಾಯಿ ಇದೆ. ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.

Related posts

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!