37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedತಾಲೂಕು ಸುದ್ದಿಬೆಳ್ತಂಗಡಿವರದಿ

ನಂದಿನಿ ಹಾಲಿನ ದರ 4 ರೂ. ಏರಿಕೆ

ಬೆಂಗಳೂರು: ಈಗಾಗಲೇ ಹಲವು ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಏರಿಕೆ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇಂದು (ಮಾ.27) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆಯಾಗಲಿದೆ. ಈ ಮೂಲಕ ಒಂದು ವರ್ಷದ ಅಂತರದಲ್ಲಿ ಎರಡು ಬಾರಿ ಹಾಲಿನ ದರ ಹೆಚ್ಚಳವಾಗಿದೆ

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರತಿ ಲೀಟ‌ರ್ ಹಾಲಿನ ದರ 5 ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದರೆ ಇದೀಗ ಸಚಿವ ಸಂಪುಟ ಪ್ರತಿ ಲೀಟರ್ ಹಾಲಿಗೆ ನಾಲ್ಕು ರೂ ಏರಿಕೆಗೆ ಒಪ್ಪಿಗೆ ನೀಡಿದೆ.

ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಸ್ ಹಾಲು ಅರ್ಧ ಲೀಟರ್ ₹24 ರೂಪಾಯಿ. ಹೋಮೋಜಿನೆಸ್ಟ್ ಟೋನ್ಸ್ ಹಾಲು ಒಂದು ಲೀಟರ್ ₹45 ರೂಪಾಯಿ ಇದೆ. ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲದ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya
error: Content is protected !!