28.6 C
ಪುತ್ತೂರು, ಬೆಳ್ತಂಗಡಿ
March 31, 2025
Uncategorizedತಾಲೂಕು ಸುದ್ದಿಬೆಳ್ತಂಗಡಿವರದಿ

ನಂದಿನಿ ಹಾಲಿನ ದರ 4 ರೂ. ಏರಿಕೆ

ಬೆಂಗಳೂರು: ಈಗಾಗಲೇ ಹಲವು ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಏರಿಕೆ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇಂದು (ಮಾ.27) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆಯಾಗಲಿದೆ. ಈ ಮೂಲಕ ಒಂದು ವರ್ಷದ ಅಂತರದಲ್ಲಿ ಎರಡು ಬಾರಿ ಹಾಲಿನ ದರ ಹೆಚ್ಚಳವಾಗಿದೆ

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರತಿ ಲೀಟ‌ರ್ ಹಾಲಿನ ದರ 5 ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದರೆ ಇದೀಗ ಸಚಿವ ಸಂಪುಟ ಪ್ರತಿ ಲೀಟರ್ ಹಾಲಿಗೆ ನಾಲ್ಕು ರೂ ಏರಿಕೆಗೆ ಒಪ್ಪಿಗೆ ನೀಡಿದೆ.

ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಸ್ ಹಾಲು ಅರ್ಧ ಲೀಟರ್ ₹24 ರೂಪಾಯಿ. ಹೋಮೋಜಿನೆಸ್ಟ್ ಟೋನ್ಸ್ ಹಾಲು ಒಂದು ಲೀಟರ್ ₹45 ರೂಪಾಯಿ ಇದೆ. ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.

Related posts

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!