23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedತಾಲೂಕು ಸುದ್ದಿಬೆಳ್ತಂಗಡಿವರದಿ

ನಂದಿನಿ ಹಾಲಿನ ದರ 4 ರೂ. ಏರಿಕೆ

ಬೆಂಗಳೂರು: ಈಗಾಗಲೇ ಹಲವು ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಏರಿಕೆ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇಂದು (ಮಾ.27) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆಯಾಗಲಿದೆ. ಈ ಮೂಲಕ ಒಂದು ವರ್ಷದ ಅಂತರದಲ್ಲಿ ಎರಡು ಬಾರಿ ಹಾಲಿನ ದರ ಹೆಚ್ಚಳವಾಗಿದೆ

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರತಿ ಲೀಟ‌ರ್ ಹಾಲಿನ ದರ 5 ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದರೆ ಇದೀಗ ಸಚಿವ ಸಂಪುಟ ಪ್ರತಿ ಲೀಟರ್ ಹಾಲಿಗೆ ನಾಲ್ಕು ರೂ ಏರಿಕೆಗೆ ಒಪ್ಪಿಗೆ ನೀಡಿದೆ.

ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಸ್ ಹಾಲು ಅರ್ಧ ಲೀಟರ್ ₹24 ರೂಪಾಯಿ. ಹೋಮೋಜಿನೆಸ್ಟ್ ಟೋನ್ಸ್ ಹಾಲು ಒಂದು ಲೀಟರ್ ₹45 ರೂಪಾಯಿ ಇದೆ. ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya
error: Content is protected !!