September 6, 2026
Uncategorizedತಾಲೂಕು ಸುದ್ದಿಬೆಳ್ತಂಗಡಿವರದಿ

ನಂದಿನಿ ಹಾಲಿನ ದರ 4 ರೂ. ಏರಿಕೆ

ಬೆಂಗಳೂರು: ಈಗಾಗಲೇ ಹಲವು ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಏರಿಕೆ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇಂದು (ಮಾ.27) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆಯಾಗಲಿದೆ. ಈ ಮೂಲಕ ಒಂದು ವರ್ಷದ ಅಂತರದಲ್ಲಿ ಎರಡು ಬಾರಿ ಹಾಲಿನ ದರ ಹೆಚ್ಚಳವಾಗಿದೆ

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರತಿ ಲೀಟ‌ರ್ ಹಾಲಿನ ದರ 5 ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದರೆ ಇದೀಗ ಸಚಿವ ಸಂಪುಟ ಪ್ರತಿ ಲೀಟರ್ ಹಾಲಿಗೆ ನಾಲ್ಕು ರೂ ಏರಿಕೆಗೆ ಒಪ್ಪಿಗೆ ನೀಡಿದೆ.

ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಸ್ ಹಾಲು ಅರ್ಧ ಲೀಟರ್ ₹24 ರೂಪಾಯಿ. ಹೋಮೋಜಿನೆಸ್ಟ್ ಟೋನ್ಸ್ ಹಾಲು ಒಂದು ಲೀಟರ್ ₹45 ರೂಪಾಯಿ ಇದೆ. ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.

Related posts

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya
error: Content is protected !!