24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorizedತಾಲೂಕು ಸುದ್ದಿಬೆಳ್ತಂಗಡಿವರದಿ

ನಂದಿನಿ ಹಾಲಿನ ದರ 4 ರೂ. ಏರಿಕೆ

ಬೆಂಗಳೂರು: ಈಗಾಗಲೇ ಹಲವು ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಏರಿಕೆ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇಂದು (ಮಾ.27) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆಯಾಗಲಿದೆ. ಈ ಮೂಲಕ ಒಂದು ವರ್ಷದ ಅಂತರದಲ್ಲಿ ಎರಡು ಬಾರಿ ಹಾಲಿನ ದರ ಹೆಚ್ಚಳವಾಗಿದೆ

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರತಿ ಲೀಟ‌ರ್ ಹಾಲಿನ ದರ 5 ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದರೆ ಇದೀಗ ಸಚಿವ ಸಂಪುಟ ಪ್ರತಿ ಲೀಟರ್ ಹಾಲಿಗೆ ನಾಲ್ಕು ರೂ ಏರಿಕೆಗೆ ಒಪ್ಪಿಗೆ ನೀಡಿದೆ.

ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಸ್ ಹಾಲು ಅರ್ಧ ಲೀಟರ್ ₹24 ರೂಪಾಯಿ. ಹೋಮೋಜಿನೆಸ್ಟ್ ಟೋನ್ಸ್ ಹಾಲು ಒಂದು ಲೀಟರ್ ₹45 ರೂಪಾಯಿ ಇದೆ. ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.

Related posts

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya
error: Content is protected !!