23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

ಅರಸಿನಮಕ್ಕಿ ವಲಯದ ಹತ್ಯಡ್ಕ ಬಿ ಕಾರ್ಯಕ್ಷೇತ್ರದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಸಾಸನ ಪಡೆಯುತ್ತಿರುವ ಕಾಳಿ ರವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿ ಹಸ್ತಾಂತರ ಕಾರ್ಯಕ್ರಮವನ್ನು ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರ ರವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಊರಿನ ಗಣ್ಯರಾದ ಗಣೇಶ್ ರವರು ಮನೆ ಹಸ್ತಾಂತರ ಮಾಡುವ ಮೂಲಕ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ. ವಾಸಿಸಲು ಸರಿಯಾದ ಮನೆ ಇಲ್ಲದೆ ಜೋಪಡಿಯಲ್ಲಿ ವಾಸಿಸುತ್ತಿದ್ದ ಕಾಳಿಯವರಿಗೆ ಕ್ಷೇತ್ರದ ಮೂಲಕ ಮನೆ ನಿರ್ಮಾಣ ಮಾಡಿ ಕೊಟ್ಟಿದ್ದು ಡಾ| ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರು ಅದೆಷ್ಟೋ ಆಸಹಾಯಕರ ಪಾಲಿಗೆ ಬೆಳಕನ್ನು ನೀಡಿದ್ದಾರೆ ಎಂದು ತಿಳಿಸಿದರು. ಸಿ ಎ ಬ್ಯಾಂಕ್ ನಿರ್ದೇಶಕರು ಸ್ಥಳೀಯ ಗಣ್ಯರಾದ ಧರ್ಮರಾಜ್ ರವರು ದೀಪ ಬೆಳಗಿಸಿ ಕ್ಷೇತ್ರದಿಂದ ಗ್ರಾಮಕ್ಕೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿದ್ದು ತುಂಬಾ ಅನುಕೂಲವಾಗಿದೆ ಎಂದು ತಿಳಿಸಿದರು.

ಜನಜಾಗೃತಿ ತಾಲೂಕು ವೇದಿಕೆ ಸದಸ್ಯರಾದ ಮಂಜುಳಾ ಕಾರಂತ್, ಚೆನ್ನಪ್ಪ ಗೌಡ, ಗಣ್ಯರಾದ ಮುರಳೀಧರ ಶೆಟ್ಟಿಗಾರ್, ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಸುನಂದಾ, ಪದಾಧಿಕಾರಿಯವರಾದ ಸರೋಜಿನಿ ಮೇಲ್ವಿಚಾರಕರಾದ ಶಶಿಕಲಾ, ಸಮನ್ವಯಧಿಕಾರಿ ಮಧುರಾ ವಸಂತ್ ಜನಜಾಗೃತಿ ಗ್ರಾಮ ಸಮಿತಿ ಸದಸ್ಯರಾದ ನಾರಾಯಣ ಹಾಗೂ ಸೇವಾಪ್ರತಿನಿಧಿಗಳಾದ ರೂಪ ಯಮುನಾ ಗಾಯತ್ರಿ ಯವರು ಉಪಸ್ಥಿತರಿದ್ದರು.

Related posts

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya

ಸೆ.12 : ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗಿ ವಿಕಲಚೇತನರ ಉದ್ಯೋಗ ಪೂರ್ವ ಕೌಶಲ್ಯ ಶಿಬಿರ- ಉದ್ಯೋಗ ಆಯ್ಕೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya
error: Content is protected !!