July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

ಅರಸಿನಮಕ್ಕಿ ವಲಯದ ಹತ್ಯಡ್ಕ ಬಿ ಕಾರ್ಯಕ್ಷೇತ್ರದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಸಾಸನ ಪಡೆಯುತ್ತಿರುವ ಕಾಳಿ ರವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿ ಹಸ್ತಾಂತರ ಕಾರ್ಯಕ್ರಮವನ್ನು ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರ ರವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಊರಿನ ಗಣ್ಯರಾದ ಗಣೇಶ್ ರವರು ಮನೆ ಹಸ್ತಾಂತರ ಮಾಡುವ ಮೂಲಕ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ. ವಾಸಿಸಲು ಸರಿಯಾದ ಮನೆ ಇಲ್ಲದೆ ಜೋಪಡಿಯಲ್ಲಿ ವಾಸಿಸುತ್ತಿದ್ದ ಕಾಳಿಯವರಿಗೆ ಕ್ಷೇತ್ರದ ಮೂಲಕ ಮನೆ ನಿರ್ಮಾಣ ಮಾಡಿ ಕೊಟ್ಟಿದ್ದು ಡಾ| ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರು ಅದೆಷ್ಟೋ ಆಸಹಾಯಕರ ಪಾಲಿಗೆ ಬೆಳಕನ್ನು ನೀಡಿದ್ದಾರೆ ಎಂದು ತಿಳಿಸಿದರು. ಸಿ ಎ ಬ್ಯಾಂಕ್ ನಿರ್ದೇಶಕರು ಸ್ಥಳೀಯ ಗಣ್ಯರಾದ ಧರ್ಮರಾಜ್ ರವರು ದೀಪ ಬೆಳಗಿಸಿ ಕ್ಷೇತ್ರದಿಂದ ಗ್ರಾಮಕ್ಕೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿದ್ದು ತುಂಬಾ ಅನುಕೂಲವಾಗಿದೆ ಎಂದು ತಿಳಿಸಿದರು.

ಜನಜಾಗೃತಿ ತಾಲೂಕು ವೇದಿಕೆ ಸದಸ್ಯರಾದ ಮಂಜುಳಾ ಕಾರಂತ್, ಚೆನ್ನಪ್ಪ ಗೌಡ, ಗಣ್ಯರಾದ ಮುರಳೀಧರ ಶೆಟ್ಟಿಗಾರ್, ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಸುನಂದಾ, ಪದಾಧಿಕಾರಿಯವರಾದ ಸರೋಜಿನಿ ಮೇಲ್ವಿಚಾರಕರಾದ ಶಶಿಕಲಾ, ಸಮನ್ವಯಧಿಕಾರಿ ಮಧುರಾ ವಸಂತ್ ಜನಜಾಗೃತಿ ಗ್ರಾಮ ಸಮಿತಿ ಸದಸ್ಯರಾದ ನಾರಾಯಣ ಹಾಗೂ ಸೇವಾಪ್ರತಿನಿಧಿಗಳಾದ ರೂಪ ಯಮುನಾ ಗಾಯತ್ರಿ ಯವರು ಉಪಸ್ಥಿತರಿದ್ದರು.

Related posts

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

Suddi Udaya

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

Suddi Udaya

ಕಬಡ್ಡಿ ಪಂದ್ಯಾಟ: ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya
error: Content is protected !!