September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

ಅರಸಿನಮಕ್ಕಿ ವಲಯದ ಹತ್ಯಡ್ಕ ಬಿ ಕಾರ್ಯಕ್ಷೇತ್ರದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಸಾಸನ ಪಡೆಯುತ್ತಿರುವ ಕಾಳಿ ರವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿ ಹಸ್ತಾಂತರ ಕಾರ್ಯಕ್ರಮವನ್ನು ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರ ರವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಊರಿನ ಗಣ್ಯರಾದ ಗಣೇಶ್ ರವರು ಮನೆ ಹಸ್ತಾಂತರ ಮಾಡುವ ಮೂಲಕ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ. ವಾಸಿಸಲು ಸರಿಯಾದ ಮನೆ ಇಲ್ಲದೆ ಜೋಪಡಿಯಲ್ಲಿ ವಾಸಿಸುತ್ತಿದ್ದ ಕಾಳಿಯವರಿಗೆ ಕ್ಷೇತ್ರದ ಮೂಲಕ ಮನೆ ನಿರ್ಮಾಣ ಮಾಡಿ ಕೊಟ್ಟಿದ್ದು ಡಾ| ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರು ಅದೆಷ್ಟೋ ಆಸಹಾಯಕರ ಪಾಲಿಗೆ ಬೆಳಕನ್ನು ನೀಡಿದ್ದಾರೆ ಎಂದು ತಿಳಿಸಿದರು. ಸಿ ಎ ಬ್ಯಾಂಕ್ ನಿರ್ದೇಶಕರು ಸ್ಥಳೀಯ ಗಣ್ಯರಾದ ಧರ್ಮರಾಜ್ ರವರು ದೀಪ ಬೆಳಗಿಸಿ ಕ್ಷೇತ್ರದಿಂದ ಗ್ರಾಮಕ್ಕೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿದ್ದು ತುಂಬಾ ಅನುಕೂಲವಾಗಿದೆ ಎಂದು ತಿಳಿಸಿದರು.

ಜನಜಾಗೃತಿ ತಾಲೂಕು ವೇದಿಕೆ ಸದಸ್ಯರಾದ ಮಂಜುಳಾ ಕಾರಂತ್, ಚೆನ್ನಪ್ಪ ಗೌಡ, ಗಣ್ಯರಾದ ಮುರಳೀಧರ ಶೆಟ್ಟಿಗಾರ್, ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಸುನಂದಾ, ಪದಾಧಿಕಾರಿಯವರಾದ ಸರೋಜಿನಿ ಮೇಲ್ವಿಚಾರಕರಾದ ಶಶಿಕಲಾ, ಸಮನ್ವಯಧಿಕಾರಿ ಮಧುರಾ ವಸಂತ್ ಜನಜಾಗೃತಿ ಗ್ರಾಮ ಸಮಿತಿ ಸದಸ್ಯರಾದ ನಾರಾಯಣ ಹಾಗೂ ಸೇವಾಪ್ರತಿನಿಧಿಗಳಾದ ರೂಪ ಯಮುನಾ ಗಾಯತ್ರಿ ಯವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!