September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

ಬೆಳ್ತಂಗಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಹೊಸದಾಗಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡದೆ ಹಿರಿಯ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದು ಜಗಜ್ಜಾಹಿರಾಗಿರುತ್ತದೆ. ತಮ್ಮ ಸರಕಾರದ ಲೋಪಗಳನ್ನು ಮುಚ್ಚಿಹಾಕಲು ಸ್ಥಳೀಯ ಕಾಂಗ್ರೆಸಿಗರು, ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಟಿ.ಬಿ ಕ್ರಾಸ್ ನಿಂದ ನಡ ಗ್ರಾಮದ ಕುತ್ರೊಟ್ಟು ಸಂಪರ್ಕ ರಸ್ತೆಗೆ ರೂ.3.00 ಕೋಟಿ ಅನುದಾನ ಮಂಜೂರುಗೊಳಿಸಿ 28.03.2023ರಂದು ಕಾಮಗಾರಿಗೆ ಆದೇಶ ದೊರಕಿಸುವಲ್ಲಿ ಯಶಸ್ವಿಯಾಗಿದ್ದರು.

ಬಳಿಕ ಬಂದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯೊಡ್ಡಿತ್ತು. ಈಗ ವಿಳಂಬವಾಗಿ ಅನುಷ್ಟಾನಗೊಳ್ಳುತ್ತಿರುವ ಹಿಂದಿನ ಸರಕಾರದ ಕಾಮಗಾರಿಯನ್ನು ತಮ್ಮ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿಗರು ಅವರ ಮುಖಂಡರ ಭಾವಚಿತ್ರವನ್ನು ಹಾಕಿ ಪುಕ್ಕಟೆ ಪ್ರಚಾರಗಿಟ್ಟಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಲಾಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಎಳನೀರು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Related posts

ಪಡಂಗಡಿ ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ರಾಮು, ಕಾರ್ಯದರ್ಶಿಯಾಗಿ ಶಿವಾನಂದ ಆಯ್ಕೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya
error: Content is protected !!