July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

ಬೆಳ್ತಂಗಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಹೊಸದಾಗಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡದೆ ಹಿರಿಯ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದು ಜಗಜ್ಜಾಹಿರಾಗಿರುತ್ತದೆ. ತಮ್ಮ ಸರಕಾರದ ಲೋಪಗಳನ್ನು ಮುಚ್ಚಿಹಾಕಲು ಸ್ಥಳೀಯ ಕಾಂಗ್ರೆಸಿಗರು, ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಟಿ.ಬಿ ಕ್ರಾಸ್ ನಿಂದ ನಡ ಗ್ರಾಮದ ಕುತ್ರೊಟ್ಟು ಸಂಪರ್ಕ ರಸ್ತೆಗೆ ರೂ.3.00 ಕೋಟಿ ಅನುದಾನ ಮಂಜೂರುಗೊಳಿಸಿ 28.03.2023ರಂದು ಕಾಮಗಾರಿಗೆ ಆದೇಶ ದೊರಕಿಸುವಲ್ಲಿ ಯಶಸ್ವಿಯಾಗಿದ್ದರು.

ಬಳಿಕ ಬಂದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯೊಡ್ಡಿತ್ತು. ಈಗ ವಿಳಂಬವಾಗಿ ಅನುಷ್ಟಾನಗೊಳ್ಳುತ್ತಿರುವ ಹಿಂದಿನ ಸರಕಾರದ ಕಾಮಗಾರಿಯನ್ನು ತಮ್ಮ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿಗರು ಅವರ ಮುಖಂಡರ ಭಾವಚಿತ್ರವನ್ನು ಹಾಕಿ ಪುಕ್ಕಟೆ ಪ್ರಚಾರಗಿಟ್ಟಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಲಾಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಎಳನೀರು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Related posts

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಲಾಯಿಲ ತರಬೇತಿ ಕೇಂದ್ರದಲ್ಲಿ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

Suddi Udaya
error: Content is protected !!