July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಮೇಲಂತಬೆಟ್ಟು : ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯನ್ನು ಮಾ. 27ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸರ್ಕಾರದಿಂದ ವಿಶೇಷ ಚೇತನ ವ್ಯಕ್ತಿಗಳಿಗೆ ಸಿಗುವ ಸೌಲಭ್ಯ ಗಳ ಬಗ್ಗೆ ಸೂಕ್ತ ಮಾಹಿತಿಯನ್ನು ತಾಲೂಕು ಸಂಯೋಜಕ ಜಾನ್ ಬ್ಯಾಪಿಸ್ಟ್ ಡಿಸೋಜಾ ಇವರು ನೀಡಿದರು.

ವಿಕಲಚೇತನರ ಸ್ನೇಹ ವಾತಾವರಣ ಹಾಗೂ ಸಮಾಜದಲ್ಲಿ ವಿಶೇಷ ಚೇತನರು ಯಾವ ರೀತಿ ಮುಂದೆ ಬರಬಹುದು ಎನ್ನುವ ಮಾಹಿತಿಯನ್ನು ನಗರ ಪಂಚಾಯತ್ ಸಂಯೋಜಕಿ ಫೌಝಿಯಾ ನೀಡಿರುತ್ತಾರೆ.

ಈ ವೇಳೆ ಪಂಚಾಯಿತಿನ ಶೇಕಡ 5ರ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು. ಈ ವಿಶೇಷ ಸಮನ್ವಯ ಗ್ರಾಮ ಸಭೆಗೆ ಪಂಚಾಯತ್ ನ ಎಲ್ಲಾ ಸದಸ್ಯರು ಮತ್ತು ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ವಲಯ ಮಟ್ಟದ ಸಿಹೆಚ್ ಒ ಭಾಗವಹಿಸಿದ್ದರು . ನಂತರ ವಿಶೇಷ ಚೇತನ ವ್ಯಕ್ತಿಗಳ ಆರೋಗ್ಯ ತಪಾಸಣೆಯು ಮಾಡಲಾಯಿತು.

ಪ್ರಭಾರ ಕಾರ್ಯ ನಿರ್ವಹಣಾ ಅಧಿಕಾರಿ ನಿರ್ಮಲ್ ಸ್ವಾಗತಿಸಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಗಣೇಶ್ ವಾರ್ಷಿಕ ವರದಿಯನ್ನು ಮಂಡಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಇಂದಬೆಟ್ಟು ಪುನರ್ವಸತಿ ಕಾರ್ಯಕರ್ತರಾದ ಎಂ ಜೆ ಜೋಸೆಫ್ ಮತ್ತು ಬೆಳಾಲು ಪುನರ್ವಸತಿ ಕಾರ್ಯಕರ್ತರಾದ ಹೀರಣ್ಣ ಮಾಡಿದರು. ಪ್ರಭಾರ ಕಾರ್ಯನಿರ್ವಹಣಾ ಅಧಿಕಾರಿಯವರು ಧನ್ಯವಾದವಿತ್ತರು.

Related posts

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya
error: Content is protected !!