23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಮೇಲಂತಬೆಟ್ಟು : ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯನ್ನು ಮಾ. 27ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸರ್ಕಾರದಿಂದ ವಿಶೇಷ ಚೇತನ ವ್ಯಕ್ತಿಗಳಿಗೆ ಸಿಗುವ ಸೌಲಭ್ಯ ಗಳ ಬಗ್ಗೆ ಸೂಕ್ತ ಮಾಹಿತಿಯನ್ನು ತಾಲೂಕು ಸಂಯೋಜಕ ಜಾನ್ ಬ್ಯಾಪಿಸ್ಟ್ ಡಿಸೋಜಾ ಇವರು ನೀಡಿದರು.

ವಿಕಲಚೇತನರ ಸ್ನೇಹ ವಾತಾವರಣ ಹಾಗೂ ಸಮಾಜದಲ್ಲಿ ವಿಶೇಷ ಚೇತನರು ಯಾವ ರೀತಿ ಮುಂದೆ ಬರಬಹುದು ಎನ್ನುವ ಮಾಹಿತಿಯನ್ನು ನಗರ ಪಂಚಾಯತ್ ಸಂಯೋಜಕಿ ಫೌಝಿಯಾ ನೀಡಿರುತ್ತಾರೆ.

ಈ ವೇಳೆ ಪಂಚಾಯಿತಿನ ಶೇಕಡ 5ರ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು. ಈ ವಿಶೇಷ ಸಮನ್ವಯ ಗ್ರಾಮ ಸಭೆಗೆ ಪಂಚಾಯತ್ ನ ಎಲ್ಲಾ ಸದಸ್ಯರು ಮತ್ತು ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ವಲಯ ಮಟ್ಟದ ಸಿಹೆಚ್ ಒ ಭಾಗವಹಿಸಿದ್ದರು . ನಂತರ ವಿಶೇಷ ಚೇತನ ವ್ಯಕ್ತಿಗಳ ಆರೋಗ್ಯ ತಪಾಸಣೆಯು ಮಾಡಲಾಯಿತು.

ಪ್ರಭಾರ ಕಾರ್ಯ ನಿರ್ವಹಣಾ ಅಧಿಕಾರಿ ನಿರ್ಮಲ್ ಸ್ವಾಗತಿಸಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಗಣೇಶ್ ವಾರ್ಷಿಕ ವರದಿಯನ್ನು ಮಂಡಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಇಂದಬೆಟ್ಟು ಪುನರ್ವಸತಿ ಕಾರ್ಯಕರ್ತರಾದ ಎಂ ಜೆ ಜೋಸೆಫ್ ಮತ್ತು ಬೆಳಾಲು ಪುನರ್ವಸತಿ ಕಾರ್ಯಕರ್ತರಾದ ಹೀರಣ್ಣ ಮಾಡಿದರು. ಪ್ರಭಾರ ಕಾರ್ಯನಿರ್ವಹಣಾ ಅಧಿಕಾರಿಯವರು ಧನ್ಯವಾದವಿತ್ತರು.

Related posts

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ “ಯಶೋ-ವಿಜಯ”ಬದುಕು-ನೆನೆಪು-ಸ್ಮರಣೆ ವಿಶೇಷ ಕಾರ್ಯಕ್ರಮ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಎಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ; ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ: ದಿ. ಪ್ರೊ. ಎಸ್. ಪ್ರಭಾಕರ್ ರವರಿಗೆ ನುಡಿನಮನ

Suddi Udaya
error: Content is protected !!