28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ  ಆಯೋಜಿಸಲಾಗಿತ್ತು.

 ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿ ಕಾಲೇಜು ಪ್ರಾಂಶುಪಾಲರು ಪ್ರೊ. ಅಲೆಕ್ಸ್ ಐವನ್ ಸಿಕ್ವೇರಾ, ನೆರವೇರಿಸಿ ಕ್ರೀಡೆ ಎಲ್ಲರ ಮನ ಬೆಳಗುವುದು ಮತ್ತು ಬದುಕಿನಲ್ಲಿ ಸ್ಪೂರ್ತಿ ನೀಡುತ್ತದೆ. ಕ್ರೀಡೆಯ ಬಗೆಗಿನ ನನ್ನ ಒಲವು ಹಲವು ವರ್ಷಗಳಿಂದ ಮುಂದುವರೆಯುತ್ತಿದೆ. ಹ್ಯಾಂಡ್ ಬಾಲ್ ಕ್ರೀಡೆಯೂ ಸಹ ಅತ್ಯಂತ ಆಕರ್ಷಣೀಯ ಕ್ರೀಡೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಾಧವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಮುಖ್ಯ ಅತಿಥಿಗಳಾಗಿ ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ವಿಪುಲ್, ಮಂಗಳೂರು ವಿಶ್ವವಿದ್ಯಾನಿಲಯದ ಪ್ರತಿನಿಧಿ ಡಾ. ಪ್ರಕಾಶ್ ಡಿ’ಸೋಜಾ ಕ್ರೀಡಾಕೂಟ ವೀಕ್ಷಕ ರಾಗಿ  ಆಗಮಿಸಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ಶ್ರೀಮತಿ ಗಾಯತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು, ಶ್ರೀಮತಿ ವಿದ್ಯಾ ಸ್ವಾಗತಿಸಿದರು, ಪ್ರೊ. ಸಂತೋಷ್ ಪ್ರಭು ವಂದಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಶೈಲೇಶ್ ಕುಮಾರ್ ಡಿ ಹೆಚ್. ಕ್ರೀಡಾಕೂಟದ ಸಂಚಾಲಕರಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿಯನ್ನು ವಿತರಿಸಿ ಮಾತನಾಡಿದ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ಪ್ರೊ. ಸುರೇಶ್ ವಿ.ಇವರು ಕ್ರೀಡಾಕೂಟದ ಆಯೋಜನೆ ಬಹಳ ಶ್ರಮದಾಯಕ,  ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಆಗ ಆಯೋಜಕರ ಶ್ರಮ ವ್ಯರ್ಥವಾಗದು ಎಂದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಮಾಧವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಸರಕಾರಿ ಪ್ರಥಮ ಕಾಲೇಜು ಪುಂಜಾಲಕಟ್ಟೆ ಇಲ್ಲಿಯ ಹಿರಿಯ ವಿದ್ಯಾರ್ಥಿಗಳಾದ ಶ್ರೀಮತಿ ರಂಜಿತ, ಉಪನ್ಯಾಸಕಿ, ರಾಹುಲ್, ಉದ್ಯಮಿ, ಸಂಘದ ಖಜಾಂಚಿ ಜಿತೇಶ್ ಕೆ. ವಕೀಲರು ಬೆಳ್ತಂಗಡಿ   ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ರೇಖಾ ಯು.ಎನ್. ಕಾರ್ಯಕ್ರಮವನ್ನು ನಿರೂಪಿಸಿದರು. ವಾಣಿಜ್ಯ ವಿಭಾಗದ ಶ್ರೀಮತಿ ಸೌಮ್ಯ ಸ್ವಾಗತಿಸಿದರು. ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಶೈಲೇಶ್ ಕುಮಾರ್ ಡಿ ಹೆಚ್. ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು.

ಸ್ಪರ್ಧೆಯಲ್ಲಿ ಎಸ್ ಡಿ ಎಂ ಕಾಲೇಜು ಉಜಿರೆ ಪ್ರಥಮ, ಆಳ್ವಾಸ್ ಕಾಲೇಜ್ ಮೂಡಬಿದ್ರೆ ದ್ವಿತೀಯ, ಎಂಪಿಎಂ ಕಾಲೇಜು ಕಾರ್ಕಳ ತೃತೀಯ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ತಂಡ ಚತುರ್ಥ ಸ್ಥಾನಗಳಿಸಿತು.

Related posts

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

Suddi Udaya

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!