39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

ಬೆಳ್ತಂಗಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಹೊಸದಾಗಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡದೆ ಹಿರಿಯ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದು ಜಗಜ್ಜಾಹಿರಾಗಿರುತ್ತದೆ. ತಮ್ಮ ಸರಕಾರದ ಲೋಪಗಳನ್ನು ಮುಚ್ಚಿಹಾಕಲು ಸ್ಥಳೀಯ ಕಾಂಗ್ರೆಸಿಗರು, ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಟಿ.ಬಿ ಕ್ರಾಸ್ ನಿಂದ ನಡ ಗ್ರಾಮದ ಕುತ್ರೊಟ್ಟು ಸಂಪರ್ಕ ರಸ್ತೆಗೆ ರೂ.3.00 ಕೋಟಿ ಅನುದಾನ ಮಂಜೂರುಗೊಳಿಸಿ 28.03.2023ರಂದು ಕಾಮಗಾರಿಗೆ ಆದೇಶ ದೊರಕಿಸುವಲ್ಲಿ ಯಶಸ್ವಿಯಾಗಿದ್ದರು.

ಬಳಿಕ ಬಂದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯೊಡ್ಡಿತ್ತು. ಈಗ ವಿಳಂಬವಾಗಿ ಅನುಷ್ಟಾನಗೊಳ್ಳುತ್ತಿರುವ ಹಿಂದಿನ ಸರಕಾರದ ಕಾಮಗಾರಿಯನ್ನು ತಮ್ಮ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿಗರು ಅವರ ಮುಖಂಡರ ಭಾವಚಿತ್ರವನ್ನು ಹಾಕಿ ಪುಕ್ಕಟೆ ಪ್ರಚಾರಗಿಟ್ಟಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಲಾಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಎಳನೀರು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Related posts

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya
error: Content is protected !!