24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

ಬೆಳ್ತಂಗಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಹೊಸದಾಗಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡದೆ ಹಿರಿಯ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದು ಜಗಜ್ಜಾಹಿರಾಗಿರುತ್ತದೆ. ತಮ್ಮ ಸರಕಾರದ ಲೋಪಗಳನ್ನು ಮುಚ್ಚಿಹಾಕಲು ಸ್ಥಳೀಯ ಕಾಂಗ್ರೆಸಿಗರು, ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಟಿ.ಬಿ ಕ್ರಾಸ್ ನಿಂದ ನಡ ಗ್ರಾಮದ ಕುತ್ರೊಟ್ಟು ಸಂಪರ್ಕ ರಸ್ತೆಗೆ ರೂ.3.00 ಕೋಟಿ ಅನುದಾನ ಮಂಜೂರುಗೊಳಿಸಿ 28.03.2023ರಂದು ಕಾಮಗಾರಿಗೆ ಆದೇಶ ದೊರಕಿಸುವಲ್ಲಿ ಯಶಸ್ವಿಯಾಗಿದ್ದರು.

ಬಳಿಕ ಬಂದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯೊಡ್ಡಿತ್ತು. ಈಗ ವಿಳಂಬವಾಗಿ ಅನುಷ್ಟಾನಗೊಳ್ಳುತ್ತಿರುವ ಹಿಂದಿನ ಸರಕಾರದ ಕಾಮಗಾರಿಯನ್ನು ತಮ್ಮ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿಗರು ಅವರ ಮುಖಂಡರ ಭಾವಚಿತ್ರವನ್ನು ಹಾಕಿ ಪುಕ್ಕಟೆ ಪ್ರಚಾರಗಿಟ್ಟಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಲಾಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಎಳನೀರು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Related posts

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya
error: Content is protected !!