25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಮೇಲಂತಬೆಟ್ಟು : ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯನ್ನು ಮಾ. 27ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸರ್ಕಾರದಿಂದ ವಿಶೇಷ ಚೇತನ ವ್ಯಕ್ತಿಗಳಿಗೆ ಸಿಗುವ ಸೌಲಭ್ಯ ಗಳ ಬಗ್ಗೆ ಸೂಕ್ತ ಮಾಹಿತಿಯನ್ನು ತಾಲೂಕು ಸಂಯೋಜಕ ಜಾನ್ ಬ್ಯಾಪಿಸ್ಟ್ ಡಿಸೋಜಾ ಇವರು ನೀಡಿದರು.

ವಿಕಲಚೇತನರ ಸ್ನೇಹ ವಾತಾವರಣ ಹಾಗೂ ಸಮಾಜದಲ್ಲಿ ವಿಶೇಷ ಚೇತನರು ಯಾವ ರೀತಿ ಮುಂದೆ ಬರಬಹುದು ಎನ್ನುವ ಮಾಹಿತಿಯನ್ನು ನಗರ ಪಂಚಾಯತ್ ಸಂಯೋಜಕಿ ಫೌಝಿಯಾ ನೀಡಿರುತ್ತಾರೆ.

ಈ ವೇಳೆ ಪಂಚಾಯಿತಿನ ಶೇಕಡ 5ರ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು. ಈ ವಿಶೇಷ ಸಮನ್ವಯ ಗ್ರಾಮ ಸಭೆಗೆ ಪಂಚಾಯತ್ ನ ಎಲ್ಲಾ ಸದಸ್ಯರು ಮತ್ತು ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ವಲಯ ಮಟ್ಟದ ಸಿಹೆಚ್ ಒ ಭಾಗವಹಿಸಿದ್ದರು . ನಂತರ ವಿಶೇಷ ಚೇತನ ವ್ಯಕ್ತಿಗಳ ಆರೋಗ್ಯ ತಪಾಸಣೆಯು ಮಾಡಲಾಯಿತು.

ಪ್ರಭಾರ ಕಾರ್ಯ ನಿರ್ವಹಣಾ ಅಧಿಕಾರಿ ನಿರ್ಮಲ್ ಸ್ವಾಗತಿಸಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಗಣೇಶ್ ವಾರ್ಷಿಕ ವರದಿಯನ್ನು ಮಂಡಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಇಂದಬೆಟ್ಟು ಪುನರ್ವಸತಿ ಕಾರ್ಯಕರ್ತರಾದ ಎಂ ಜೆ ಜೋಸೆಫ್ ಮತ್ತು ಬೆಳಾಲು ಪುನರ್ವಸತಿ ಕಾರ್ಯಕರ್ತರಾದ ಹೀರಣ್ಣ ಮಾಡಿದರು. ಪ್ರಭಾರ ಕಾರ್ಯನಿರ್ವಹಣಾ ಅಧಿಕಾರಿಯವರು ಧನ್ಯವಾದವಿತ್ತರು.

Related posts

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!