September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಮೇಲಂತಬೆಟ್ಟು : ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯನ್ನು ಮಾ. 27ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸರ್ಕಾರದಿಂದ ವಿಶೇಷ ಚೇತನ ವ್ಯಕ್ತಿಗಳಿಗೆ ಸಿಗುವ ಸೌಲಭ್ಯ ಗಳ ಬಗ್ಗೆ ಸೂಕ್ತ ಮಾಹಿತಿಯನ್ನು ತಾಲೂಕು ಸಂಯೋಜಕ ಜಾನ್ ಬ್ಯಾಪಿಸ್ಟ್ ಡಿಸೋಜಾ ಇವರು ನೀಡಿದರು.

ವಿಕಲಚೇತನರ ಸ್ನೇಹ ವಾತಾವರಣ ಹಾಗೂ ಸಮಾಜದಲ್ಲಿ ವಿಶೇಷ ಚೇತನರು ಯಾವ ರೀತಿ ಮುಂದೆ ಬರಬಹುದು ಎನ್ನುವ ಮಾಹಿತಿಯನ್ನು ನಗರ ಪಂಚಾಯತ್ ಸಂಯೋಜಕಿ ಫೌಝಿಯಾ ನೀಡಿರುತ್ತಾರೆ.

ಈ ವೇಳೆ ಪಂಚಾಯಿತಿನ ಶೇಕಡ 5ರ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು. ಈ ವಿಶೇಷ ಸಮನ್ವಯ ಗ್ರಾಮ ಸಭೆಗೆ ಪಂಚಾಯತ್ ನ ಎಲ್ಲಾ ಸದಸ್ಯರು ಮತ್ತು ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ವಲಯ ಮಟ್ಟದ ಸಿಹೆಚ್ ಒ ಭಾಗವಹಿಸಿದ್ದರು . ನಂತರ ವಿಶೇಷ ಚೇತನ ವ್ಯಕ್ತಿಗಳ ಆರೋಗ್ಯ ತಪಾಸಣೆಯು ಮಾಡಲಾಯಿತು.

ಪ್ರಭಾರ ಕಾರ್ಯ ನಿರ್ವಹಣಾ ಅಧಿಕಾರಿ ನಿರ್ಮಲ್ ಸ್ವಾಗತಿಸಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಗಣೇಶ್ ವಾರ್ಷಿಕ ವರದಿಯನ್ನು ಮಂಡಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಇಂದಬೆಟ್ಟು ಪುನರ್ವಸತಿ ಕಾರ್ಯಕರ್ತರಾದ ಎಂ ಜೆ ಜೋಸೆಫ್ ಮತ್ತು ಬೆಳಾಲು ಪುನರ್ವಸತಿ ಕಾರ್ಯಕರ್ತರಾದ ಹೀರಣ್ಣ ಮಾಡಿದರು. ಪ್ರಭಾರ ಕಾರ್ಯನಿರ್ವಹಣಾ ಅಧಿಕಾರಿಯವರು ಧನ್ಯವಾದವಿತ್ತರು.

Related posts

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಸಹಕಾರಿ ಕ್ಷೇತ್ರದ ಅಪ್ರತಿಮ ಸಾಧಕ ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

Suddi Udaya
error: Content is protected !!