September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ  ಆಯೋಜಿಸಲಾಗಿತ್ತು.

 ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿ ಕಾಲೇಜು ಪ್ರಾಂಶುಪಾಲರು ಪ್ರೊ. ಅಲೆಕ್ಸ್ ಐವನ್ ಸಿಕ್ವೇರಾ, ನೆರವೇರಿಸಿ ಕ್ರೀಡೆ ಎಲ್ಲರ ಮನ ಬೆಳಗುವುದು ಮತ್ತು ಬದುಕಿನಲ್ಲಿ ಸ್ಪೂರ್ತಿ ನೀಡುತ್ತದೆ. ಕ್ರೀಡೆಯ ಬಗೆಗಿನ ನನ್ನ ಒಲವು ಹಲವು ವರ್ಷಗಳಿಂದ ಮುಂದುವರೆಯುತ್ತಿದೆ. ಹ್ಯಾಂಡ್ ಬಾಲ್ ಕ್ರೀಡೆಯೂ ಸಹ ಅತ್ಯಂತ ಆಕರ್ಷಣೀಯ ಕ್ರೀಡೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಾಧವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಮುಖ್ಯ ಅತಿಥಿಗಳಾಗಿ ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ವಿಪುಲ್, ಮಂಗಳೂರು ವಿಶ್ವವಿದ್ಯಾನಿಲಯದ ಪ್ರತಿನಿಧಿ ಡಾ. ಪ್ರಕಾಶ್ ಡಿ’ಸೋಜಾ ಕ್ರೀಡಾಕೂಟ ವೀಕ್ಷಕ ರಾಗಿ  ಆಗಮಿಸಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ಶ್ರೀಮತಿ ಗಾಯತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು, ಶ್ರೀಮತಿ ವಿದ್ಯಾ ಸ್ವಾಗತಿಸಿದರು, ಪ್ರೊ. ಸಂತೋಷ್ ಪ್ರಭು ವಂದಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಶೈಲೇಶ್ ಕುಮಾರ್ ಡಿ ಹೆಚ್. ಕ್ರೀಡಾಕೂಟದ ಸಂಚಾಲಕರಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿಯನ್ನು ವಿತರಿಸಿ ಮಾತನಾಡಿದ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ಪ್ರೊ. ಸುರೇಶ್ ವಿ.ಇವರು ಕ್ರೀಡಾಕೂಟದ ಆಯೋಜನೆ ಬಹಳ ಶ್ರಮದಾಯಕ,  ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಆಗ ಆಯೋಜಕರ ಶ್ರಮ ವ್ಯರ್ಥವಾಗದು ಎಂದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಮಾಧವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಸರಕಾರಿ ಪ್ರಥಮ ಕಾಲೇಜು ಪುಂಜಾಲಕಟ್ಟೆ ಇಲ್ಲಿಯ ಹಿರಿಯ ವಿದ್ಯಾರ್ಥಿಗಳಾದ ಶ್ರೀಮತಿ ರಂಜಿತ, ಉಪನ್ಯಾಸಕಿ, ರಾಹುಲ್, ಉದ್ಯಮಿ, ಸಂಘದ ಖಜಾಂಚಿ ಜಿತೇಶ್ ಕೆ. ವಕೀಲರು ಬೆಳ್ತಂಗಡಿ   ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ರೇಖಾ ಯು.ಎನ್. ಕಾರ್ಯಕ್ರಮವನ್ನು ನಿರೂಪಿಸಿದರು. ವಾಣಿಜ್ಯ ವಿಭಾಗದ ಶ್ರೀಮತಿ ಸೌಮ್ಯ ಸ್ವಾಗತಿಸಿದರು. ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಶೈಲೇಶ್ ಕುಮಾರ್ ಡಿ ಹೆಚ್. ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು.

ಸ್ಪರ್ಧೆಯಲ್ಲಿ ಎಸ್ ಡಿ ಎಂ ಕಾಲೇಜು ಉಜಿರೆ ಪ್ರಥಮ, ಆಳ್ವಾಸ್ ಕಾಲೇಜ್ ಮೂಡಬಿದ್ರೆ ದ್ವಿತೀಯ, ಎಂಪಿಎಂ ಕಾಲೇಜು ಕಾರ್ಕಳ ತೃತೀಯ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ತಂಡ ಚತುರ್ಥ ಸ್ಥಾನಗಳಿಸಿತು.

Related posts

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಸುಶ್ರುತ ಜಯಂತಿ ಅಂಗವಾಗಿ ಅಗ್ನಿಕರ್ಮ ನೋವು ನಿವಾರಕ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya
error: Content is protected !!