24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

ಬೆಳ್ತಂಗಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಹೊಸದಾಗಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡದೆ ಹಿರಿಯ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದು ಜಗಜ್ಜಾಹಿರಾಗಿರುತ್ತದೆ. ತಮ್ಮ ಸರಕಾರದ ಲೋಪಗಳನ್ನು ಮುಚ್ಚಿಹಾಕಲು ಸ್ಥಳೀಯ ಕಾಂಗ್ರೆಸಿಗರು, ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಟಿ.ಬಿ ಕ್ರಾಸ್ ನಿಂದ ನಡ ಗ್ರಾಮದ ಕುತ್ರೊಟ್ಟು ಸಂಪರ್ಕ ರಸ್ತೆಗೆ ರೂ.3.00 ಕೋಟಿ ಅನುದಾನ ಮಂಜೂರುಗೊಳಿಸಿ 28.03.2023ರಂದು ಕಾಮಗಾರಿಗೆ ಆದೇಶ ದೊರಕಿಸುವಲ್ಲಿ ಯಶಸ್ವಿಯಾಗಿದ್ದರು.

ಬಳಿಕ ಬಂದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯೊಡ್ಡಿತ್ತು. ಈಗ ವಿಳಂಬವಾಗಿ ಅನುಷ್ಟಾನಗೊಳ್ಳುತ್ತಿರುವ ಹಿಂದಿನ ಸರಕಾರದ ಕಾಮಗಾರಿಯನ್ನು ತಮ್ಮ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿಗರು ಅವರ ಮುಖಂಡರ ಭಾವಚಿತ್ರವನ್ನು ಹಾಕಿ ಪುಕ್ಕಟೆ ಪ್ರಚಾರಗಿಟ್ಟಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಲಾಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಎಳನೀರು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Related posts

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!