23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

ಬೆಳ್ತಂಗಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಹೊಸದಾಗಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡದೆ ಹಿರಿಯ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದು ಜಗಜ್ಜಾಹಿರಾಗಿರುತ್ತದೆ. ತಮ್ಮ ಸರಕಾರದ ಲೋಪಗಳನ್ನು ಮುಚ್ಚಿಹಾಕಲು ಸ್ಥಳೀಯ ಕಾಂಗ್ರೆಸಿಗರು, ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಟಿ.ಬಿ ಕ್ರಾಸ್ ನಿಂದ ನಡ ಗ್ರಾಮದ ಕುತ್ರೊಟ್ಟು ಸಂಪರ್ಕ ರಸ್ತೆಗೆ ರೂ.3.00 ಕೋಟಿ ಅನುದಾನ ಮಂಜೂರುಗೊಳಿಸಿ 28.03.2023ರಂದು ಕಾಮಗಾರಿಗೆ ಆದೇಶ ದೊರಕಿಸುವಲ್ಲಿ ಯಶಸ್ವಿಯಾಗಿದ್ದರು.

ಬಳಿಕ ಬಂದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯೊಡ್ಡಿತ್ತು. ಈಗ ವಿಳಂಬವಾಗಿ ಅನುಷ್ಟಾನಗೊಳ್ಳುತ್ತಿರುವ ಹಿಂದಿನ ಸರಕಾರದ ಕಾಮಗಾರಿಯನ್ನು ತಮ್ಮ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿಗರು ಅವರ ಮುಖಂಡರ ಭಾವಚಿತ್ರವನ್ನು ಹಾಕಿ ಪುಕ್ಕಟೆ ಪ್ರಚಾರಗಿಟ್ಟಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಲಾಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಎಳನೀರು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Related posts

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya
error: Content is protected !!