23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಧರ್ಮಸ್ಥಳ ಯುನಿಸೆಫ್ ಹೈದರಾಬಾದ್ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ನೀರು ಉಳಿಸಿ ಮಹಾ ಅಭಿಯಾನ ನಡೆಯಿತು.

ಬೆಳ್ತಂಗಡಿ ತಾಲೂಕಿನಾದ್ಯಂತ ಶುದ್ಧ ನೀರು ಯಾಕೆ ಬೇಕು, ನೀರಿನ ನಿರ್ವಹಣೆಯ ಅವಶ್ಯಕತೆ ಏಕೆದೆ, ಪ್ರಸ್ತುತ ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ನೀರಿನ ಪರಿಸ್ಥಿತಿ ಹೇಗಿದೆ,ನೀರಿನ ಸಂರಕ್ಷಣೆಯಲ್ಲಿ ನಮ್ಮ ಹೊಣೆಗಾರಿಕೆ ಏನು, ನಾವು ಸಣ್ಣ ಮಟ್ಟದಲ್ಲಿ ಹೇಗೆ ನೀರನ್ನು ಉಳಿತಾಯ ಮಾಡಬಹುದು ಎನ್ನುವ ವಿಚಾರವಾಗಿ ಮನೆ ಯೋಜನಾಧಿಕಾರಿಗಳಾದ ಸುರೇಂದ್ರ ರವರು ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.

ಮನೆಯಲ್ಲಿ ಇಂಗು ಗುಂಡಿಯನ್ನು ನಿರ್ಮಾಣ ಮಾಡಿ ಮನೆಯ ಸುತ್ತಮುತ್ತಲಿನ ನೀರನ್ನು ಭೂಮಿಗೆ ಇಂಗಿಸುವಂತೆ ಮಾಡುವುದು. ಸಮುದಾಯದ ಭಾಗಗಳಲ್ಲಿ ಇಂಗು ಗುಂಡಿ ನಿರ್ಮಿಸಿ, ಆ ನೀರನ್ನು ಭೂಮಿಗೆ ಇಂಗಿಸುವಂತೆ ಮಾಡುವುದು.
ಟ್ಯಾಪ್ ತೋರದಂತೆ ನೋಡಿಕೊಳ್ಳುವುದು, ಮನೆಯಲ್ಲಿ ಹಲ್ಲುಜ್ಜುವಾಗ, ಸೇವಿಂಗ್ ಮಾಡುವಾಗ, ಸ್ನಾನ ಮಾಡುತ್ತಿರುವಾಗ ಟ್ಯಾಪಿನಲ್ಲಿ ನಿರಂತರವಾಗಿ ನೀರು ಸೋರದಂತೆ ನೋಡುತ್ತಿರುವುದು, ಗಿಡಗಳಿಗೆ ಯಥೇಚ್ಛವಾಗಿ ನೀರು ನೀಡದೆ ಇರುವುದು ಈ ರೀತಿಯಾಗಿ ನಾವು ನೀರನ್ನು ಉಳಿಕೆ ಮಾಡಬಹುದು ಎಂದು ತಿಳಿಸಲಾಯಿತು.

ಈ ಸಂದರ್ಭ ಕೃಷಿ ಮೇಲ್ವಿಚಾರಕರಾದ ರಾಮ್ ಕುಮಾರ್, ಕಚೇರಿ ಮ್ಯಾನೇಜರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya
error: Content is protected !!