22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಮೇಲಂತಬೆಟ್ಟು : ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯನ್ನು ಮಾ. 27ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸರ್ಕಾರದಿಂದ ವಿಶೇಷ ಚೇತನ ವ್ಯಕ್ತಿಗಳಿಗೆ ಸಿಗುವ ಸೌಲಭ್ಯ ಗಳ ಬಗ್ಗೆ ಸೂಕ್ತ ಮಾಹಿತಿಯನ್ನು ತಾಲೂಕು ಸಂಯೋಜಕ ಜಾನ್ ಬ್ಯಾಪಿಸ್ಟ್ ಡಿಸೋಜಾ ಇವರು ನೀಡಿದರು.

ವಿಕಲಚೇತನರ ಸ್ನೇಹ ವಾತಾವರಣ ಹಾಗೂ ಸಮಾಜದಲ್ಲಿ ವಿಶೇಷ ಚೇತನರು ಯಾವ ರೀತಿ ಮುಂದೆ ಬರಬಹುದು ಎನ್ನುವ ಮಾಹಿತಿಯನ್ನು ನಗರ ಪಂಚಾಯತ್ ಸಂಯೋಜಕಿ ಫೌಝಿಯಾ ನೀಡಿರುತ್ತಾರೆ.

ಈ ವೇಳೆ ಪಂಚಾಯಿತಿನ ಶೇಕಡ 5ರ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು. ಈ ವಿಶೇಷ ಸಮನ್ವಯ ಗ್ರಾಮ ಸಭೆಗೆ ಪಂಚಾಯತ್ ನ ಎಲ್ಲಾ ಸದಸ್ಯರು ಮತ್ತು ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ವಲಯ ಮಟ್ಟದ ಸಿಹೆಚ್ ಒ ಭಾಗವಹಿಸಿದ್ದರು . ನಂತರ ವಿಶೇಷ ಚೇತನ ವ್ಯಕ್ತಿಗಳ ಆರೋಗ್ಯ ತಪಾಸಣೆಯು ಮಾಡಲಾಯಿತು.

ಪ್ರಭಾರ ಕಾರ್ಯ ನಿರ್ವಹಣಾ ಅಧಿಕಾರಿ ನಿರ್ಮಲ್ ಸ್ವಾಗತಿಸಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಗಣೇಶ್ ವಾರ್ಷಿಕ ವರದಿಯನ್ನು ಮಂಡಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಇಂದಬೆಟ್ಟು ಪುನರ್ವಸತಿ ಕಾರ್ಯಕರ್ತರಾದ ಎಂ ಜೆ ಜೋಸೆಫ್ ಮತ್ತು ಬೆಳಾಲು ಪುನರ್ವಸತಿ ಕಾರ್ಯಕರ್ತರಾದ ಹೀರಣ್ಣ ಮಾಡಿದರು. ಪ್ರಭಾರ ಕಾರ್ಯನಿರ್ವಹಣಾ ಅಧಿಕಾರಿಯವರು ಧನ್ಯವಾದವಿತ್ತರು.

Related posts

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ಮಲವಂತಿಗೆ: ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ ನಿಧನ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!