23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ ಮಾ. 27 ರಂದು ಶಿಶುಮಂದಿರ ವಠಾರದಲ್ಲಿ ಜರುಗಿತು.

ಉದಯ ಭಟ್ ಸಭಾಧ್ಯಕ್ಷತೆ ವಹಿಸಿದ್ದರು. ಅಲೆಕ್ಕಿ ಶ್ರೀರಾಮ ಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್.ಎನ್, ಸಂಚಾಲಕರಾದ ಅಶೋಕ್ ಎನ್. , ಶಿಶುಮಂದಿರದ ಹಿರಿಯ ವಿದ್ಯಾರ್ಥಿಗಳು, ಪೋಷಕರು, ಮಾತಾಜಿಯವರು, ಮಾತೃ ಮಂಡಳಿ, ಹಾಗೂ ಜೈ ಶ್ರೀರಾಮ್ ಮಹಿಳಾ ಸಂಘ ಅಲೆಕ್ಕಿ ಮುಗೇರಡ್ಕ ಇದರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಶಿಶುಮಂದಿರದಿಂದ ಮುಂದಿನ ಶೈಕ್ಷಣಿಕ ತರಗತಿಗೆ ತೆರಳುತ್ತಿರುವ ಚಿಣ್ಣರಿಗೆ ನೆನಪಿನ ಕಾಣಿಕೆ ನೀಡಿ, ಮುಂದಿನ ಭವಿಷ್ಯ ಉತ್ತಮವಾಗಿರಲೆಂದು ಹಾರೈಸಿ ಬೀಳ್ಕೊಡಲಾಯಿತು.
ಪ್ರಸವಕ್ಕಾಗಿ ತೆರಳುತ್ತಿರುವ ಶಿಶು ಮಂದಿರದ ಗೀತಾ ಮಾತಾಜಿ ಮತ್ತು ನವ್ಯ ಮಾತಾಜಿ ಯವರಿಗೆ ಸುಖ ಪ್ರಸವಕ್ಕಾಗಿ ಶುಭಕೋರಿದ ಸಮಿತಿ ಮತ್ತು ಮಾತೆಯರು ಬಾಗಿನ ನೀಡಿ ಹರಸಿದರು.
ಸಭೆಯಲ್ಲಿ ಹೆತ್ತವರ ಮಹತ್ವ ತಿಳಿಸಿ, ಅವರನ್ನು ಪುಷ್ಪಾರ್ಚನೆ ಮಾಡಿ ಸ್ವಾಗತಿಸಲಾಯಿತು.
ಶಿಶು ಮಂದಿರದ ಅನ್ನದಾಸೋಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಹಕರಿಸುತ್ತಿರುವ ದಾನಿಗಳಾದ ಧರ್ಣಪ್ಪ ಗೌಡ ನಿರುಂಬುಡ, ಶ್ರೀಮತಿ ಸರಿತಾ ನಿರುoಬುಡ, ಗಿರಿಧರ ಗೌಡ ನಿರುoಬುಡ ಇವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.
1 ನೇ ತರಗತಿಯ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಿರುವ ಮಕ್ಕಳ ಪೋಷಕರು ಶಿಶುಮಂದಿರಕ್ಕೆ ಗೋಡ್ರೇಜ್ ನ್ನು ಕೊಡುಗೆಯಾಗಿ ನೀಡಿದರು.


2024-25 ನೇ ಸಾಲಿನ ಮಾತೃ ಮಂಡಳಿಯ ಪದಾಧಿಕಾರಿಗಳು ಶಿಶುಮಂದಿರಕ್ಕೆ ದೀಪವನ್ನು ಉಡುಗೊರೆಯಾಗಿ ನೀಡಿದರು. .
ಪುಷ್ಪಲತಾ ಮಾತಾಜಿಯವರು ಸ್ವಾಗತಿಸಿ, ನಿರೂಪಿಸಿದರು. ಸಮಿತಿಯ ಸದಸ್ಯರಾದ ಭರತೇಶ್ ಪುಣ್ಕೆದಡಿಯವರು ಧನ್ಯವಾದವಿತ್ತರು.

Related posts

ನಾರಾಯಣ ಅಭ್ಯಂಕರ್ ನಿಧನ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya
error: Content is protected !!