23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ ಮಾ. 27 ರಂದು ಶಿಶುಮಂದಿರ ವಠಾರದಲ್ಲಿ ಜರುಗಿತು.

ಉದಯ ಭಟ್ ಸಭಾಧ್ಯಕ್ಷತೆ ವಹಿಸಿದ್ದರು. ಅಲೆಕ್ಕಿ ಶ್ರೀರಾಮ ಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್.ಎನ್, ಸಂಚಾಲಕರಾದ ಅಶೋಕ್ ಎನ್. , ಶಿಶುಮಂದಿರದ ಹಿರಿಯ ವಿದ್ಯಾರ್ಥಿಗಳು, ಪೋಷಕರು, ಮಾತಾಜಿಯವರು, ಮಾತೃ ಮಂಡಳಿ, ಹಾಗೂ ಜೈ ಶ್ರೀರಾಮ್ ಮಹಿಳಾ ಸಂಘ ಅಲೆಕ್ಕಿ ಮುಗೇರಡ್ಕ ಇದರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಶಿಶುಮಂದಿರದಿಂದ ಮುಂದಿನ ಶೈಕ್ಷಣಿಕ ತರಗತಿಗೆ ತೆರಳುತ್ತಿರುವ ಚಿಣ್ಣರಿಗೆ ನೆನಪಿನ ಕಾಣಿಕೆ ನೀಡಿ, ಮುಂದಿನ ಭವಿಷ್ಯ ಉತ್ತಮವಾಗಿರಲೆಂದು ಹಾರೈಸಿ ಬೀಳ್ಕೊಡಲಾಯಿತು.
ಪ್ರಸವಕ್ಕಾಗಿ ತೆರಳುತ್ತಿರುವ ಶಿಶು ಮಂದಿರದ ಗೀತಾ ಮಾತಾಜಿ ಮತ್ತು ನವ್ಯ ಮಾತಾಜಿ ಯವರಿಗೆ ಸುಖ ಪ್ರಸವಕ್ಕಾಗಿ ಶುಭಕೋರಿದ ಸಮಿತಿ ಮತ್ತು ಮಾತೆಯರು ಬಾಗಿನ ನೀಡಿ ಹರಸಿದರು.
ಸಭೆಯಲ್ಲಿ ಹೆತ್ತವರ ಮಹತ್ವ ತಿಳಿಸಿ, ಅವರನ್ನು ಪುಷ್ಪಾರ್ಚನೆ ಮಾಡಿ ಸ್ವಾಗತಿಸಲಾಯಿತು.
ಶಿಶು ಮಂದಿರದ ಅನ್ನದಾಸೋಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಹಕರಿಸುತ್ತಿರುವ ದಾನಿಗಳಾದ ಧರ್ಣಪ್ಪ ಗೌಡ ನಿರುಂಬುಡ, ಶ್ರೀಮತಿ ಸರಿತಾ ನಿರುoಬುಡ, ಗಿರಿಧರ ಗೌಡ ನಿರುoಬುಡ ಇವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.
1 ನೇ ತರಗತಿಯ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಿರುವ ಮಕ್ಕಳ ಪೋಷಕರು ಶಿಶುಮಂದಿರಕ್ಕೆ ಗೋಡ್ರೇಜ್ ನ್ನು ಕೊಡುಗೆಯಾಗಿ ನೀಡಿದರು.


2024-25 ನೇ ಸಾಲಿನ ಮಾತೃ ಮಂಡಳಿಯ ಪದಾಧಿಕಾರಿಗಳು ಶಿಶುಮಂದಿರಕ್ಕೆ ದೀಪವನ್ನು ಉಡುಗೊರೆಯಾಗಿ ನೀಡಿದರು. .
ಪುಷ್ಪಲತಾ ಮಾತಾಜಿಯವರು ಸ್ವಾಗತಿಸಿ, ನಿರೂಪಿಸಿದರು. ಸಮಿತಿಯ ಸದಸ್ಯರಾದ ಭರತೇಶ್ ಪುಣ್ಕೆದಡಿಯವರು ಧನ್ಯವಾದವಿತ್ತರು.

Related posts

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya
error: Content is protected !!