23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ ಮಾ. 27 ರಂದು ಶಿಶುಮಂದಿರ ವಠಾರದಲ್ಲಿ ಜರುಗಿತು.

ಉದಯ ಭಟ್ ಸಭಾಧ್ಯಕ್ಷತೆ ವಹಿಸಿದ್ದರು. ಅಲೆಕ್ಕಿ ಶ್ರೀರಾಮ ಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್.ಎನ್, ಸಂಚಾಲಕರಾದ ಅಶೋಕ್ ಎನ್. , ಶಿಶುಮಂದಿರದ ಹಿರಿಯ ವಿದ್ಯಾರ್ಥಿಗಳು, ಪೋಷಕರು, ಮಾತಾಜಿಯವರು, ಮಾತೃ ಮಂಡಳಿ, ಹಾಗೂ ಜೈ ಶ್ರೀರಾಮ್ ಮಹಿಳಾ ಸಂಘ ಅಲೆಕ್ಕಿ ಮುಗೇರಡ್ಕ ಇದರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಶಿಶುಮಂದಿರದಿಂದ ಮುಂದಿನ ಶೈಕ್ಷಣಿಕ ತರಗತಿಗೆ ತೆರಳುತ್ತಿರುವ ಚಿಣ್ಣರಿಗೆ ನೆನಪಿನ ಕಾಣಿಕೆ ನೀಡಿ, ಮುಂದಿನ ಭವಿಷ್ಯ ಉತ್ತಮವಾಗಿರಲೆಂದು ಹಾರೈಸಿ ಬೀಳ್ಕೊಡಲಾಯಿತು.
ಪ್ರಸವಕ್ಕಾಗಿ ತೆರಳುತ್ತಿರುವ ಶಿಶು ಮಂದಿರದ ಗೀತಾ ಮಾತಾಜಿ ಮತ್ತು ನವ್ಯ ಮಾತಾಜಿ ಯವರಿಗೆ ಸುಖ ಪ್ರಸವಕ್ಕಾಗಿ ಶುಭಕೋರಿದ ಸಮಿತಿ ಮತ್ತು ಮಾತೆಯರು ಬಾಗಿನ ನೀಡಿ ಹರಸಿದರು.
ಸಭೆಯಲ್ಲಿ ಹೆತ್ತವರ ಮಹತ್ವ ತಿಳಿಸಿ, ಅವರನ್ನು ಪುಷ್ಪಾರ್ಚನೆ ಮಾಡಿ ಸ್ವಾಗತಿಸಲಾಯಿತು.
ಶಿಶು ಮಂದಿರದ ಅನ್ನದಾಸೋಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಹಕರಿಸುತ್ತಿರುವ ದಾನಿಗಳಾದ ಧರ್ಣಪ್ಪ ಗೌಡ ನಿರುಂಬುಡ, ಶ್ರೀಮತಿ ಸರಿತಾ ನಿರುoಬುಡ, ಗಿರಿಧರ ಗೌಡ ನಿರುoಬುಡ ಇವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.
1 ನೇ ತರಗತಿಯ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಿರುವ ಮಕ್ಕಳ ಪೋಷಕರು ಶಿಶುಮಂದಿರಕ್ಕೆ ಗೋಡ್ರೇಜ್ ನ್ನು ಕೊಡುಗೆಯಾಗಿ ನೀಡಿದರು.


2024-25 ನೇ ಸಾಲಿನ ಮಾತೃ ಮಂಡಳಿಯ ಪದಾಧಿಕಾರಿಗಳು ಶಿಶುಮಂದಿರಕ್ಕೆ ದೀಪವನ್ನು ಉಡುಗೊರೆಯಾಗಿ ನೀಡಿದರು. .
ಪುಷ್ಪಲತಾ ಮಾತಾಜಿಯವರು ಸ್ವಾಗತಿಸಿ, ನಿರೂಪಿಸಿದರು. ಸಮಿತಿಯ ಸದಸ್ಯರಾದ ಭರತೇಶ್ ಪುಣ್ಕೆದಡಿಯವರು ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya
error: Content is protected !!