July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

ಧರ್ಮಸ್ಥಳ : ರಶ್ಯಾದಿಂದ ಏಳು ಜನ ಪ್ರವಾಸಿಗರ ತಂಡ ಧರ್ಮಸ್ಥಳಕ್ಕೆ ಮಾ.29 ರಂದು ಆಗಮಿಸಿದ್ದು, ದೇವರ ದರ್ಶನ ಮಾಡಿ, ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯ, ಮಂಜೂಷಾ ವಸ್ತು ಸಂಗ್ರಹಾಲಯ, ಅನ್ನಪೂರ್ಣದಲ್ಲಿ ಅನ್ನದಾಸೋಹದ ವ್ಯವಸ್ಥೆ, ಬಾಹುಬಲಿ ಬೆಟ್ಟ, ಉದ್ಯಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯದಲ್ಲಿ ಸಂರಕ್ಷಿಸಿ ಇಡಲಾದ ಹಳೆ ಕಾರುಗಳು, ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಸಂಗ್ರಹಿಸಿ, ಸಂರಕ್ಷಿಸಿ ಪ್ರದರ್ಶನಕ್ಕಿಟ್ಟ ಅಪೂರ್ವ ಕೆಮರಾಗಳು, ಹಳೆಯ ವಾಹನಗಳು, ನಾಣ್ಯಗಳು, ಜಾನಪದೀಯ ವಸ್ತುಗಳ ಸಂಗ್ರಹವನ್ನು ಕುತೂಹಲದಿಂದ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು
ಧರ್ಮಸ್ಥಳದಲ್ಲಿ ಸ್ವಚ್ಛತೆ, ಶಿಸ್ತು, ಅಚ್ಚುಕಟ್ಟು ಹಾಗೂ ಆತಿಥ್ಯದ ಬಗ್ಗೆ ಅಪಾರ ಸಂತಸ ಮತ್ತು ಶ್ಲಾಘನೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಯಂದಿರ ದಿನಾಚರಣೆ ಮತ್ತು ಅಭಿನಂದನೋತ್ಸವ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!