September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಬಂದಾರು: ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟ ಬಂದಾರು ಇದರ ವಾರ್ಷಿಕ ಮಹಾಸಭೆ ಮಾ. 28 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಚಿತ್ರರವರು ಅಧ್ಯಕ್ಷತೆ ವಹಿಸಿದ್ದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷ ಪುಷ್ಪಾವತಿ ಬರಮೇಲು, ಸದಸ್ಯರಾದ ಅನಿತಾ ಉದಯ ಕುರುಡಂಗೆ, ಭಾರತಿ ಕೊಡಿಯೇಲು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾಶ್ರೀ, ಪದಾಧಿಕಾರಿಗಳಾದ ಸುರೇಖಾ, ಉಷಾ, ಪುಷ್ಪಾವತಿ, ಶೀಲಾವತಿ, ಭವ್ಯ, ತೀರ್ಥಶ್ರೀ,ಸುಚಿತ್ರ, ಗೀತಾ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರು ಮಹಾಸಭೆಯ ಬಗ್ಗೆ ಮತ್ತು ಸಂಜೀವಿನಿಯ ಧ್ಯೇಯ ಉದ್ದೇಶಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎಂ.ಬಿ.ಕೆ ಭಾಗ್ಯಶ್ರೀ ಯವರು 2023 -24ರ ವಾರ್ಷಿಕ ವರದಿಯನ್ನು ಮಂಡನೆ ಮಾಡಿದರು. ಸಂಘದ ಸದಸ್ಯರಿಂದ ಅನುಮೋದನೆ ಪಡೆಯಲಾಯಿತು. 2023-24ರ ಜಮಾ ಮತ್ತು ಖರ್ಚಿನ ಬಗ್ಗೆ ಎಲ್.ಸಿ.ಆರ್.ಪಿ ಯಾದ ಹರ್ಷಿಣಿ ಯವರು ವರದಿ ಮಾಡಿದರು. ಅತ್ಯುತ್ತಮ ಸಂಘವನ್ನು ಗುರುತಿಸಿ ಸ್ಮರಣಿಕೆ ನೀಡಲಾಯಿತು. ಮಹಾಸಭೆಗೆ ಅತೀಹೆಚ್ಚು ಸದಸ್ಯರು ಭಾಗವಹಿಸಿದ 4 ಸಂಜೀವಿನಿ ಸ್ವಸಹಾಯ ಸಂಘಕ್ಕೆ ಸ್ಮರಣಿಕೆ ನೀಡಲಾಯಿತು. ಹಳೆ ಪದಾಧಿಕಾರಿಗಳಿಂದ ಹೊಸ ಪದಾಧಿಕಾರಿಗಳಿಗೆ ದಾಖಲಾತಿ ಹಸ್ತಾಂತರ ಮಾಡಿ ಪದಗ್ರಹಣ ಮಾಡಲಾಯಿತು. ಬೀಳ್ಕೊಟ್ಟ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಹಾಗೂ ಮಾಜಿ ಎಂ.ಬಿ.ಕೆ ಗೆ ಗೌರವ ಸ್ಮರಣಿಕೆ ನೀಡಿ ಸನ್ಮಾನ ಮಾಡಲಾಯಿತು. ಅದೇ ರೀತಿ ಶೀಲಾವತಿಯವರನ್ನು ಸನ್ಮಾನ ಮಾಡಲಾಯಿತು.

ಲಕ್ಷ್ಮೀ ಸ್ವಾಗತಿಸಿದರು. ಶ್ರೀಮತಿ ಭಾಗ್ಯಶ್ರೀ ಎಂ.ಬಿ.ಕೆ ನಿರೂಪಿಸಿದರು. ಶ್ರೀಮತಿ ಚಂದ್ರಿಕಾ ವಂದಿಸಿದರು. ಮಹಾಸಭೆಯ ಉಸ್ತುವಾರಿಯನ್ನು ಎಲ್.ಸಿ.ಆರ್. ಪಿ ಯಾದ ಪವಿತ್ರ ವಹಿಸಿದ್ದರು.

Related posts

ಪಾಲೇದು: ತಮ್ಮಯ್ಯ ಪೂಜಾರಿ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಕೆ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya
error: Content is protected !!