23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

ಬೆಳ್ತಂಗಡಿ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ. 28 ರಂದು ಕಾಲೇಜಿನ ಕನ್ನಡ ವಿಭಾಗದಿಂದ ಜಾನಪದ ವೈಭವ 2025 ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ.ರವರು ಉದ್ಘಾಟಿಸುವುದರ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕಾಲೇಜಿನ ಕನ್ನಡ ವಿಭಾಗದ ನಿವೃತ್ತ ಅಧ್ಯಾಪಕರಾದ ಡಾ. ಶರತ್ ಕುಮಾರ್ ಟಿ. ಕೆ.ಭಾಗವಹಿಸಿ ಮಾತನಾಡಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಮಾರುತಿ ಜಿ. ಇವರು ಪ್ರಾಸ್ತಾವಿಕ ನುಡಿಯನ್ನು ನುಡಿದರು. ಪ್ರೊ. ಸುಧಾರಾಣಿ ಸ್ವಾಗತಿಸಿದರು. ಪ್ರೊ. ಪದ್ಮನಾಭ, ಪ್ರೊ. ರೊನಾಲ್ಡೊ ಪ್ರವೀಣ್ ಕೊರೆಯಾ ಅತಿಥಿಗಳಾಗಿ ಭಾಗವಹಿಸಿದ್ದರು.

ಜಾನಪದ ವೈಭವ- 2025 ಕಾರ್ಯಕ್ರಮದಲ್ಲಿ ಜನಪದ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, 10 ತಂಡಗಳಲ್ಲಿ ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು. ಜಾನಪದ ಮೆರುಗನ್ನು ಮೆರೆಯುವ ಜನಪದ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ನಿರೂಪಣೆಯನ್ನು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸುಚಿತ್ರಾ ನಡೆಸಿಕೊಟ್ಟರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

Suddi Udaya

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!