September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

ಬೆಳ್ತಂಗಡಿ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ. 28 ರಂದು ಕಾಲೇಜಿನ ಕನ್ನಡ ವಿಭಾಗದಿಂದ ಜಾನಪದ ವೈಭವ 2025 ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ.ರವರು ಉದ್ಘಾಟಿಸುವುದರ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕಾಲೇಜಿನ ಕನ್ನಡ ವಿಭಾಗದ ನಿವೃತ್ತ ಅಧ್ಯಾಪಕರಾದ ಡಾ. ಶರತ್ ಕುಮಾರ್ ಟಿ. ಕೆ.ಭಾಗವಹಿಸಿ ಮಾತನಾಡಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಮಾರುತಿ ಜಿ. ಇವರು ಪ್ರಾಸ್ತಾವಿಕ ನುಡಿಯನ್ನು ನುಡಿದರು. ಪ್ರೊ. ಸುಧಾರಾಣಿ ಸ್ವಾಗತಿಸಿದರು. ಪ್ರೊ. ಪದ್ಮನಾಭ, ಪ್ರೊ. ರೊನಾಲ್ಡೊ ಪ್ರವೀಣ್ ಕೊರೆಯಾ ಅತಿಥಿಗಳಾಗಿ ಭಾಗವಹಿಸಿದ್ದರು.

ಜಾನಪದ ವೈಭವ- 2025 ಕಾರ್ಯಕ್ರಮದಲ್ಲಿ ಜನಪದ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, 10 ತಂಡಗಳಲ್ಲಿ ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು. ಜಾನಪದ ಮೆರುಗನ್ನು ಮೆರೆಯುವ ಜನಪದ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ನಿರೂಪಣೆಯನ್ನು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸುಚಿತ್ರಾ ನಡೆಸಿಕೊಟ್ಟರು.

Related posts

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!