23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಿಂಡರ್ಗಾರ್ಟನ್ ಯುಕೆಜಿ ಎ ಹಾಗೂ ಬಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ ಸೀಡ್ ಜರ್ಮಿನೇಶನ್, ಕಮ್ಯೂನಿಟಿ ಹೆಲ್ಪರ್ಸ್, ಡೂ ಅವರ್ ಡ್ಯೂಟಿ, ಥೀಮ್ ಡ್ಯಾನ್ಸ್ ಇತ್ಯಾದಿ ವೈವಿಧ್ಯಮಯ ಕಾರ್ಯಕ್ರಮ ನಡೆಯಿತು.

ಸಾನಿಧ್ಯ ಮಯ್ಯ ಗಾಳಿಪಟ ಚಿತ್ರ ರಚಿಸಿ ಕಲಾಕುಂಚ ಪ್ರತಿಭೆ ಪ್ರದರ್ಶಿಸಿದರು.
ಅಕ್ಷರಾ ಪಾರ್ವತಿ, ಆರಾಧನಾ ಕುಲಾಲ್ ತಮ್ಮ ಕಿಂಡರ್ ಗಾರ್ಟನ್ ಜರ್ನಿ ಬಗ್ಗೆ ಅನಿಸಿಕೆ ಹಂಚಿಕೊಂಡರು.

ಮಾತೃ-ಪಿತೃ ವಂದನ: ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿ ಪ್ರಾಥಮಿಕ ಶಿಕ್ಷಣಕ್ಕೆ ಅಡಿಯಿಡುತ್ತಿರುವ ಪುಟಾಣಿಗಳು ತಮ್ಮ ತಂದೆ-ತಾಯಿಯರಿಗೆ ಆರತಿ ಬೆಳಗಿ ಆಶೀರ್ವಾದ ಪಡೆದರು.

ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಮಕ್ಕಳಿಗೆ ಶುಭಾಶಯ ಹಾರೈಸಿದರು. ಕಾರ್ಯಕ್ರಮದ್ಲಲಿ ಕಿಂಡರ್ ಗಾರ್ಟನ್ ಶಿಕ್ಷಕಿಯರು, ಪೋಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಮಕ್ಕಳ ಪಾಲಕರಾದ ಸವಿತಾ, ಜಯಶ್ರೀ, ಸತೀಶ್ ಆಚಾರ್ , ಮಮತಾ ಕೆ, ರಾಧಿಕ ಅನಿಸಿಕೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳಾದ ಆರಾಧನಾ ಕುಲಾಲ್, ರಶ್ಮಿಕಾ ರಮೆಶ್, ಪ್ರಾಧ್ಯಾ ಪ್ರದೀಪ್, ಅಕ್ಷರ ಪಾರ್ವತಿ, ಸಾನಿಧ್ಯ ಮಯ್ಯ, ಆದ್ಯಾ ಹೊಳ್ಳ ಪ್ರಾರ್ಥಿಸಿದರು.

ಸಹರ್ಷ್ ಎಸ್. ಸ್ವಾಗತಿಸಿದರು. ಮಹಮ್ಮದ್ ಬಿಶ್ರುಲ್ ಹಾಫಿ ವಂದಿಸಿದರು.

Related posts

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya
error: Content is protected !!