23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಿಂಡರ್ಗಾರ್ಟನ್ ಯುಕೆಜಿ ಎ ಹಾಗೂ ಬಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ ಸೀಡ್ ಜರ್ಮಿನೇಶನ್, ಕಮ್ಯೂನಿಟಿ ಹೆಲ್ಪರ್ಸ್, ಡೂ ಅವರ್ ಡ್ಯೂಟಿ, ಥೀಮ್ ಡ್ಯಾನ್ಸ್ ಇತ್ಯಾದಿ ವೈವಿಧ್ಯಮಯ ಕಾರ್ಯಕ್ರಮ ನಡೆಯಿತು.

ಸಾನಿಧ್ಯ ಮಯ್ಯ ಗಾಳಿಪಟ ಚಿತ್ರ ರಚಿಸಿ ಕಲಾಕುಂಚ ಪ್ರತಿಭೆ ಪ್ರದರ್ಶಿಸಿದರು.
ಅಕ್ಷರಾ ಪಾರ್ವತಿ, ಆರಾಧನಾ ಕುಲಾಲ್ ತಮ್ಮ ಕಿಂಡರ್ ಗಾರ್ಟನ್ ಜರ್ನಿ ಬಗ್ಗೆ ಅನಿಸಿಕೆ ಹಂಚಿಕೊಂಡರು.

ಮಾತೃ-ಪಿತೃ ವಂದನ: ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿ ಪ್ರಾಥಮಿಕ ಶಿಕ್ಷಣಕ್ಕೆ ಅಡಿಯಿಡುತ್ತಿರುವ ಪುಟಾಣಿಗಳು ತಮ್ಮ ತಂದೆ-ತಾಯಿಯರಿಗೆ ಆರತಿ ಬೆಳಗಿ ಆಶೀರ್ವಾದ ಪಡೆದರು.

ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಮಕ್ಕಳಿಗೆ ಶುಭಾಶಯ ಹಾರೈಸಿದರು. ಕಾರ್ಯಕ್ರಮದ್ಲಲಿ ಕಿಂಡರ್ ಗಾರ್ಟನ್ ಶಿಕ್ಷಕಿಯರು, ಪೋಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಮಕ್ಕಳ ಪಾಲಕರಾದ ಸವಿತಾ, ಜಯಶ್ರೀ, ಸತೀಶ್ ಆಚಾರ್ , ಮಮತಾ ಕೆ, ರಾಧಿಕ ಅನಿಸಿಕೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳಾದ ಆರಾಧನಾ ಕುಲಾಲ್, ರಶ್ಮಿಕಾ ರಮೆಶ್, ಪ್ರಾಧ್ಯಾ ಪ್ರದೀಪ್, ಅಕ್ಷರ ಪಾರ್ವತಿ, ಸಾನಿಧ್ಯ ಮಯ್ಯ, ಆದ್ಯಾ ಹೊಳ್ಳ ಪ್ರಾರ್ಥಿಸಿದರು.

ಸಹರ್ಷ್ ಎಸ್. ಸ್ವಾಗತಿಸಿದರು. ಮಹಮ್ಮದ್ ಬಿಶ್ರುಲ್ ಹಾಫಿ ವಂದಿಸಿದರು.

Related posts

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya
error: Content is protected !!