23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಿಂಡರ್ಗಾರ್ಟನ್ ಯುಕೆಜಿ ಎ ಹಾಗೂ ಬಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ ಸೀಡ್ ಜರ್ಮಿನೇಶನ್, ಕಮ್ಯೂನಿಟಿ ಹೆಲ್ಪರ್ಸ್, ಡೂ ಅವರ್ ಡ್ಯೂಟಿ, ಥೀಮ್ ಡ್ಯಾನ್ಸ್ ಇತ್ಯಾದಿ ವೈವಿಧ್ಯಮಯ ಕಾರ್ಯಕ್ರಮ ನಡೆಯಿತು.

ಸಾನಿಧ್ಯ ಮಯ್ಯ ಗಾಳಿಪಟ ಚಿತ್ರ ರಚಿಸಿ ಕಲಾಕುಂಚ ಪ್ರತಿಭೆ ಪ್ರದರ್ಶಿಸಿದರು.
ಅಕ್ಷರಾ ಪಾರ್ವತಿ, ಆರಾಧನಾ ಕುಲಾಲ್ ತಮ್ಮ ಕಿಂಡರ್ ಗಾರ್ಟನ್ ಜರ್ನಿ ಬಗ್ಗೆ ಅನಿಸಿಕೆ ಹಂಚಿಕೊಂಡರು.

ಮಾತೃ-ಪಿತೃ ವಂದನ: ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿ ಪ್ರಾಥಮಿಕ ಶಿಕ್ಷಣಕ್ಕೆ ಅಡಿಯಿಡುತ್ತಿರುವ ಪುಟಾಣಿಗಳು ತಮ್ಮ ತಂದೆ-ತಾಯಿಯರಿಗೆ ಆರತಿ ಬೆಳಗಿ ಆಶೀರ್ವಾದ ಪಡೆದರು.

ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಮಕ್ಕಳಿಗೆ ಶುಭಾಶಯ ಹಾರೈಸಿದರು. ಕಾರ್ಯಕ್ರಮದ್ಲಲಿ ಕಿಂಡರ್ ಗಾರ್ಟನ್ ಶಿಕ್ಷಕಿಯರು, ಪೋಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಮಕ್ಕಳ ಪಾಲಕರಾದ ಸವಿತಾ, ಜಯಶ್ರೀ, ಸತೀಶ್ ಆಚಾರ್ , ಮಮತಾ ಕೆ, ರಾಧಿಕ ಅನಿಸಿಕೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳಾದ ಆರಾಧನಾ ಕುಲಾಲ್, ರಶ್ಮಿಕಾ ರಮೆಶ್, ಪ್ರಾಧ್ಯಾ ಪ್ರದೀಪ್, ಅಕ್ಷರ ಪಾರ್ವತಿ, ಸಾನಿಧ್ಯ ಮಯ್ಯ, ಆದ್ಯಾ ಹೊಳ್ಳ ಪ್ರಾರ್ಥಿಸಿದರು.

ಸಹರ್ಷ್ ಎಸ್. ಸ್ವಾಗತಿಸಿದರು. ಮಹಮ್ಮದ್ ಬಿಶ್ರುಲ್ ಹಾಫಿ ವಂದಿಸಿದರು.

Related posts

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya
error: Content is protected !!