25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

ಉಜಿರೆ : ಗ್ರಾಮ ಪಂಚಾಯತ್ ಉಜಿರೆ ಇದರ ಸಭಾಂಗಣದಲ್ಲಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ ಉಜಿರೆ, ಗ್ರಾಮ ಪಂಚಾಯತ್ ಉಜಿರೆ, ಮತ್ತು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದಲ್ಲಿ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿನುತ ರಜತ್ ಗೌಡ ಇವರ ಅಧ್ಯಕ್ಷತೆಯಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಅಣಬೆ ಕೃಷಿ ಬಗ್ಗೆ ಸಂಪನ್ಮೂಲ ವ್ಯಕ್ತಿಯಾದ ಸುಲೈಮಾನ್ ಬೆಳಾಲು ಮತ್ತು ಅಡಿಕೆ ಕೃಷಿ ನಿರ್ವಹಣೆ, ನೀರಿನ ಸದ್ಭಳಕೆ ಮತ್ತು ರೋಗ ಹತೋಟಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಉಪಸ್ಥಿತರಿದ್ದು ಸಂಜೀವಿನಿ ಒಕ್ಕೂಟದ ಈ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಗಣೇಶ್, ಪ್ರಭಾಕರ ಮಯ್ಯ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೃಷಿ ಸಖಿ ಭಾಗಿರಥಿ ಸ್ವಾಗತಿಸಿ ಅಚ್ಚು ಕಟ್ಟಾಗಿ ಕಾರ್ಯಕ್ರಮ ಸಂಯೋಜಿಸಿದರು. ಒಕ್ಕೂಟದ ಕಾರ್ಯ ದರ್ಶಿ ದೀಪ , ಸುಜಾತ, ಎಲ್.ಸಿ ಆರ್ ಪಿ ಚಿತ್ರ, ಪಶು ಸಖಿ ಏಕಲತ ಸಹಕರಿಸಿದರು. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮದ ಕೃಷಿಕರು ಮತ್ತು ಮಹಿಳೆಯರು ತರಬೇತಿಯ ಪ್ರಯೋಜನವನ್ನು ಪಡೆದುಕೊಂಡರು. ಅಧ್ಯಕ್ಷ ವಿನುತ ರಜತ್ ಗೌಡ ಧನ್ಯವಾದ ಸಮರ್ಪಿಸಿದರು.

Related posts

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!