July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

ಉಜಿರೆ : ಗ್ರಾಮ ಪಂಚಾಯತ್ ಉಜಿರೆ ಇದರ ಸಭಾಂಗಣದಲ್ಲಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ ಉಜಿರೆ, ಗ್ರಾಮ ಪಂಚಾಯತ್ ಉಜಿರೆ, ಮತ್ತು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದಲ್ಲಿ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿನುತ ರಜತ್ ಗೌಡ ಇವರ ಅಧ್ಯಕ್ಷತೆಯಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಅಣಬೆ ಕೃಷಿ ಬಗ್ಗೆ ಸಂಪನ್ಮೂಲ ವ್ಯಕ್ತಿಯಾದ ಸುಲೈಮಾನ್ ಬೆಳಾಲು ಮತ್ತು ಅಡಿಕೆ ಕೃಷಿ ನಿರ್ವಹಣೆ, ನೀರಿನ ಸದ್ಭಳಕೆ ಮತ್ತು ರೋಗ ಹತೋಟಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಉಪಸ್ಥಿತರಿದ್ದು ಸಂಜೀವಿನಿ ಒಕ್ಕೂಟದ ಈ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಗಣೇಶ್, ಪ್ರಭಾಕರ ಮಯ್ಯ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೃಷಿ ಸಖಿ ಭಾಗಿರಥಿ ಸ್ವಾಗತಿಸಿ ಅಚ್ಚು ಕಟ್ಟಾಗಿ ಕಾರ್ಯಕ್ರಮ ಸಂಯೋಜಿಸಿದರು. ಒಕ್ಕೂಟದ ಕಾರ್ಯ ದರ್ಶಿ ದೀಪ , ಸುಜಾತ, ಎಲ್.ಸಿ ಆರ್ ಪಿ ಚಿತ್ರ, ಪಶು ಸಖಿ ಏಕಲತ ಸಹಕರಿಸಿದರು. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮದ ಕೃಷಿಕರು ಮತ್ತು ಮಹಿಳೆಯರು ತರಬೇತಿಯ ಪ್ರಯೋಜನವನ್ನು ಪಡೆದುಕೊಂಡರು. ಅಧ್ಯಕ್ಷ ವಿನುತ ರಜತ್ ಗೌಡ ಧನ್ಯವಾದ ಸಮರ್ಪಿಸಿದರು.

Related posts

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya
error: Content is protected !!