27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಎಂಬ ವಿಷಯ ಕುರಿತು ಇತ್ತೀಚೆಗೆ ಅಂತರ್ ಕಾಲೇಜು ಕಾರ್ಯಗಾರ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರೊ. ರವಿ, ನಿರ್ದೇಶಕರು ಎನ್‌ಐಟಿಕೆ ಸುರತ್ಕಲ್, ರವರು ಮಾತನಾಡುತ್ತಾ ‘ಶಿಕ್ಷಕರು ಅದ್ಯಾಪನದೊಂದಿಗೆ ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಬೋಧನಾ ಸಾಮರ್ಥ್ಯ ಹೆಚ್ಚಾಗುವುದು ಎಂದರು ಹಾಗೂ ಉತ್ತಮ ಸಂಶೋಧನಾ ಪ್ರಸ್ತಾವನೆಗಳನ್ನು ವಿವಿಧ ಅನುದಾನ ನೀಡುವ ಸಂಸ್ಥೆಗಳಿಗೆ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು, ಕಾರ್ಯಕ್ರಮ ಸಂಯೋಜಕರಾದ ಡಾ. ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ ಸ್ವಾಗತಿಸಿ, ವಂದಿಸಿದರು. ಎಸ್‌ಡಿಯಂ ಶಿಕ್ಷಣ ಸಂಸ್ಥೆಗಳ ಪ್ರಾಧ್ಯಾಪಕರು ಭಾಗವಹಿಸಿದರು.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya
error: Content is protected !!